July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

ಉಜಿರೆ: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ ಉಜಿರೆ ಇವರ ವತಿಯಿಂದ ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ ಶ್ರೀನಿವಾಸ ಪೂಜಾರಿ ಪೆರ್ಮುದೆ, ಕೊಯ್ಯೂರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ ಮಹತ್ವವನ್ನು ವಿವರಿಸಿದ ಅವರು, ಪೌಷ್ಟಿಕಾಂಶಯುಕ್ತ ಸಾಂಪ್ರದಾಯಿಕ ಆಹಾರಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಆಸರೆ ಸದಸ್ಯರು ತಯಾರಿಸಿ ತಂದ ವಿವಿಧ ಬಗೆಯ ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಸವಿದು ಸಂಭ್ರಮಿಸಿದರು. ಆಟಿ ತಿಂಗಳ ಆಚರಣೆಗಳ ಹಿಂದಿರುವ ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಯಿತು.

ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಕೆ. ಕರುಣಾಕರ ಜೈನ್ ಶ್ರೀಮತಿ ಅನಸೂಯಾ ರೈ ಹಾಗೂ ಸುರೇಶ್ ಗೌಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸರೆ ಸಂಘದ ಅಧ್ಯಕ್ಷರಾದ ಪ್ರಶಾಂತ್ ಕುದ್ಯಾಡಿ ಸ್ಬಾಗತಿಸಿ, ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ವನ್ನು ಗೌತಮ್ ಕುಕ್ಕಾನ್ ನಿರ್ವಹಿಸಿದರು.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!