July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

ವೇಣೂರು : ಪ್ರಮೋದ್ ಶೆಟ್ಟಿ ಸಿರಿಮನೆ ಟ್ರೇಡರ್ಸ್ ಮಾಲಕರು ಅವರ ಪುತ್ರಿ ಸೃಷ್ಟಿ ಅವರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಮಾಂಟೇಸರಿ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಮ್ಮ ಶಾಲೆಯ ಮೇಲಿನ ಅಭಿಮಾನ, ಪ್ರೀತಿ ಹಾಗೂ ಸಾಮಾಜಿಕ ಕಳಕಳಿಯ ಸಂಕೇತವಾಗಿ ಶಾಲೆಯ ಉಪಯೋಗಕ್ಕಾಗಿ ಎರಡು ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ.

ಅವರ ಈ ಉದಾರ, ಶ್ಲಾಘನೀಯ ಕೊಡುಗೆಯನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಶಾಲಾ ಸಂಸ್ಥಾಪಕ ಗಿರೀಶ್ ಕೆ. ಎಚ್., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್. ಎನ್., ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಸೌಮ್ಯ ಅವರು ಶ್ರೀ ಪ್ರಮೋದ್ ಶೆಟ್ಟಿ ಹಾಗೂ ಕುಮಾರಿ ಸೃಷ್ಟಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉದಾರ ಸಹಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಇಂತಹ ಸಮಾಜಮುಖಿ ಸಹಕಾರ ಮತ್ತು ಶಿಕ್ಷಣ ಸಂಸ್ಥೆಗಳ ಮೇಲಿನ ಕಾಳಜಿಯು ಇತರರಿಗೂ ಪ್ರೇರಣೆಯಾಗಲಿ ಎಂದು ಸಂಸ್ಥೆಯ ವತಿಯಿಂದ ಶುಭ ಹಾರೈಸಲಾಯಿತು.

Related posts

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!