25.7 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

ಸವಣಾಲು : 2026- 27 ನೇ ಶೈಕ್ಷಣಿಕ ವರ್ಷದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ ಮತ್ತು ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಜು. 6ರಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದ್ಘಾಟಕರಾಗಿ ಗ್ರಾಮ ಪಂಚಾಯಿತಿ ಮೇಲಂತಬೆಟ್ಟು ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಅವರು ಪ್ರಮಾಣ ವಚನ ಬೋಧಿಸಿ ಮಾತನಾಡಿ ಸಹಪಠ್ಯ ಚಟುವಟಿಕೆಗಳು, ಮಕ್ಕಳಲ್ಲಿ ನಾಯಕತ್ವ ಗುಣ, ಹೊಂದಾಣಿಕೆಯಂತಹ ಗುಣಗಳನ್ನು ಮೈಗೂಡಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಇದು ಕಲಿಕೆಗೆ ಪ್ರೇರಣೆಯನ್ನು ನೀಡುವುದರೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೂ ಸಹಕಾರಿಯಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ದಯಾನಂದ ರೈಯವರು ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ತವ್ಯ ಬೋಧನೆಯನ್ನು ಶಾಲಾಡಳಿತ ಸಮಿತಿಯ ಸದಸ್ಯ ಶಿವಪ್ರಸಾದ್ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಮಮತಾ. ಎಸ್ ಸ್ವಾಗತಿಸಿದರು. ಶಿಕ್ಷಕಿ ಕುl ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸೌಮ್ಯ ಧನ್ಯವಾದ ನೀಡಿದರು. ಶಿಕ್ಷಕಿಯರಾದ ಸುಜಾತ ಮತ್ತು ವೈಶಾಲಿ ಕಾರ್ಯಕ್ರಮಕ್ಕೆ ಸಹಕರಿಸಿ ಯಶಸ್ವಿಗೊಳಿಸಿದರು.

Related posts

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಐದು ದಿನಗಳ ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!