July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ: 2026-27 ರ ಪ್ರವೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಜು.1ರಂದು, ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನ ಕಾರ್ಯಾಗಾರ (ವರ್ಕ್‌ಶಾಪ್) ಸೆಮಿನಾರ್ ಹಾಲ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ (An Insight to SDM)’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಯ ನಿರ್ದೇಶಕ ಪ್ರದೀಪ್ ಶೆಟ್ಟಿ ಭಾಗವಹಿಸಿ, ಎಸ್.ಡಿ.ಎಂ. ಸಂಸ್ಥೆಯ ಪರಂಪರೆ, ಧ್ಯೇಯ ಹಾಗೂ ಸಮಾಜಮುಖಿ ಸೇವಾ ತತ್ವಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಪರಿಚಯಿಸಿದರು. ತಮ್ಮ ಉಪನ್ಯಾಸದಲ್ಲಿ ಅವರು ಎಸ್.ಡಿ.ಎಂ.ನ ‘ಚತುರ್ಧಾನ’ ಸಂಸ್ಕೃತಿಯನ್ನು ವಿವರಿಸಿ, ಅನ್ನದಾನ, ವಿದ್ಯಾದಾನ, ಆರೋಗ್ಯದಾನ ಹಾಗೂ ಅಭಯದಾನ ಎಂಬ ನಾಲ್ಕು ಪ್ರಮುಖ ಮೌಲ್ಯಗಳ ಮೂಲಕ ಎಸ್.ಡಿ.ಎಂ. ಸಂಸ್ಥೆಯು ಸಮಾಜ ಸೇವೆ, ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಸಲ್ಲಿಸುತ್ತಿರುವ ಮಹತ್ವದ ಕೊಡುಗೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಎಸ್.ಡಿ.ಎಂ.ನ ಆದರ್ಶಗಳು ಮತ್ತು ಮೌಲ್ಯಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಪ್ರದೀಪ್ ಶೆಟ್ಟಿ ಅವರನ್ನು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಎಸ್.ಡಿ.ಎಂ.ನ ಸೇವಾ ಪರಂಪರೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ಸಮಾಜಮುಖಿ ಕಾರ್ಯಚಟುವಟಿಕೆಗಳ ಕುರಿತು ಆಳವಾದ ಅರಿವನ್ನು ಪಡೆದರು.

ಕಾರ್ಯಕ್ರಮವನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಈಶ್ವರ್ ಶರ್ಮ ನಿರೂಪಿಸಿದರು.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya
error: Content is protected !!