29 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

ಉಜಿರೆ: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ ಉಜಿರೆ ಇವರ ವತಿಯಿಂದ ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ ಶ್ರೀನಿವಾಸ ಪೂಜಾರಿ ಪೆರ್ಮುದೆ, ಕೊಯ್ಯೂರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ ಮಹತ್ವವನ್ನು ವಿವರಿಸಿದ ಅವರು, ಪೌಷ್ಟಿಕಾಂಶಯುಕ್ತ ಸಾಂಪ್ರದಾಯಿಕ ಆಹಾರಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಆಸರೆ ಸದಸ್ಯರು ತಯಾರಿಸಿ ತಂದ ವಿವಿಧ ಬಗೆಯ ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಸವಿದು ಸಂಭ್ರಮಿಸಿದರು. ಆಟಿ ತಿಂಗಳ ಆಚರಣೆಗಳ ಹಿಂದಿರುವ ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಯಿತು.

ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಕೆ. ಕರುಣಾಕರ ಜೈನ್ ಶ್ರೀಮತಿ ಅನಸೂಯಾ ರೈ ಹಾಗೂ ಸುರೇಶ್ ಗೌಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸರೆ ಸಂಘದ ಅಧ್ಯಕ್ಷರಾದ ಪ್ರಶಾಂತ್ ಕುದ್ಯಾಡಿ ಸ್ಬಾಗತಿಸಿ, ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ವನ್ನು ಗೌತಮ್ ಕುಕ್ಕಾನ್ ನಿರ್ವಹಿಸಿದರು.

Related posts

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya
error: Content is protected !!