22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

ವೇಣೂರು: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಆಶ್ರಯದಲ್ಲಿ, ಗೌಡರ (ಒಕ್ಕಲಿಗರ) ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಗಳ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮವು ಬೆಳ್ತಂಗಡಿಯ ಸಿವಿಸಿ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಚಿನ್ಮಯಿ ಅವರು ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಕಾರ್ಯಕ್ರಮದಲ್ಲಿ ವಿದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಕುಂಭಶ್ರೀ ಶಾಲೆಯ ಹಳೆ ವಿದ್ಯಾರ್ಥಿ ಮಾಸ್ಟರ್ ಪೂಜಿತ್ ಕುಲಾಲ್ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಸಂಸ್ಥಾಪಕ ಗಿರೀಶ್ ಕೆ. ಎಚ್., ಸಂಚಾಲಕರಾದ ಅಶ್ವಿತ್ ಕುಲಾಲ್, ಮುಖ್ಯೋಪಾಧ್ಯಾಯರು, ಮುಖ್ಯೋಪಾಧ್ಯಾಯಿನಿಯರು ಹಾಗೂ ಶಿಕ್ಷಕ-ಶಿಕ್ಷಕಿಯರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಾಧನೆಗಳನ್ನು ದಾಖಲಿಸಲಿ ಎಂದು ಶುಭ ಹಾರೈಸಿದರು.

Related posts

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಮುಂಡಾಜೆ ಯುವವಾಹಿನಿ ಸಂಚಲನಾ ಸಮಿತಿಯ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
error: Content is protected !!