24.1 C
ಪುತ್ತೂರು, ಬೆಳ್ತಂಗಡಿ
July 9, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

ಬೆಳ್ತಂಗಡಿ: ಜು.5ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡವು ಅದ್ಭುತ ಪ್ರದರ್ಶನ ನೀಡಿ ಪ್ರಥಮ ಬಹುಮಾನ ಹಾಗೂ ರೂ.25,000 ನಗದು ಬಹುಮಾನ ತನ್ನದಾಗಿಸಿಕೊಂಡಿತು.

ಕೇವಲ 3 ತಿಂಗಳ ಹಿಂದೆ ಆರಂಭವಾದ ಈ ತಂಡ, ನಿರಂತರ ಅಭ್ಯಾಸ, ಶಿಸ್ತು, ಪರಿಶ್ರಮ ಮತ್ತು ತಂಡದ ಒಗ್ಗಟ್ಟಿನ ಬಲದಿಂದ ಅಲ್ಪ ಅವಧಿಯಲ್ಲೇ ಈ ಮಹತ್ವದ ಸಾಧನೆಯನ್ನು ದಾಖಲಿಸಿದೆ. ಪ್ರತಿಯೊಬ್ಬ ಸದಸ್ಯರ ಸಮರ್ಪಣೆ, ಸಂಯೋಜಕರ ಶ್ರಮ ಹಾಗೂ ಹಿರಿಯರ ಆಶೀರ್ವಾದದಿಂದ ಈ ವಿಜಯ ಸಾಧ್ಯವಾಯಿತು.

ಈ ಸಾಧನೆಯ ಹಿಂದೆ ಹಾಡು ಮತ್ತು ಕುಣಿತ ಸಂಯೋಜಕರ ಶ್ರಮ ಅತ್ಯಂತ ಮಹತ್ವದ್ದಾಗಿದೆ. ತಂಡದ ಪ್ರತಿಯೊಬ್ಬ ಸದಸ್ಯರೂ ತಮ್ಮ ಪ್ರತಿಭೆ, ಶಿಸ್ತು ಮತ್ತು ಸಮರ್ಪಣೆಯಿಂದ ವೇದಿಕೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ತಂಡದ ಸದಸ್ಯರು: ಸುನಿಲ್ ದೇವಾಡಿಗ ಉಜಿರೆ (ಹಾಡು ಸಂಯೋಜಕರು), ಶಿವಶಂಕರ್ ಗೇರುಕಟ್ಟೆ (ಹಾಡು ಸಂಯೋಜಕರು), ಅನ್ವಿತ್ ಬೆಳ್ತಂಗಡಿ (ಕುಣಿತ ಸಂಯೋಜಕರು), ಆಯುಷ್ ನಾಳ, ಹರ್ಷಿಣಿ ಶೆಟ್ಟಿ ನಾವೂರು, ತೃಷ ನಾವೂರು, ಉದಿತ್ ಉಜಿರೆ, ಮಾನ್ಯ ಕೋಟ್ಯಾನ್ ಉಜಿರೆ, ಕೃತಿ ಉಜಿರೆ, ಭೂಷಣ್ ಶೆಟ್ಟಿಗಾರ್ ಉಜಿರೆ, ಧನ್ವಿ ಉಜಿರೆ, ಸಿಂಚನ ಉಜಿರೆ, ದೀಕ್ಷಾ ಉಜಿರೆ, ಸಮನ್ವಿ ಉಜಿರೆ

ತಂಡದ ಈ ಯಶಸ್ಸಿಗೆ ಸಹಕರಿಸಿದ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ, ತೀರ್ಪುಗಾರರು, ಸಂಘಟಕರು, ದಾನಿಗಳು, ಅಭಿಮಾನಿಗಳು ಹಾಗೂ ಪ್ರತಿಯೊಬ್ಬ ಬೆಂಬಲಿಗರಿಗೂ ತಂಡವು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

“ಕೇವಲ ಮೂರು ತಿಂಗಳ ಪಯಣ… ಆದರೆ ಮೂರು ತಿಂಗಳ ಪರಿಶ್ರಮಕ್ಕೆ ಸಿಕ್ಕ ಮೊದಲ ದೊಡ್ಡ ಗೆಲುವು. ಇದು ಅಂತ್ಯವಲ್ಲ, ಇನ್ನೂ ಅನೇಕ ಸಾಧನೆಗಳ ಆರಂಭ.”

Related posts

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya
error: Content is protected !!