23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

ಗುರುವಾಯನಕೆರೆ: ಕಳೆದ ವರ್ಷ ವಿಜಯವಾಣಿ ದಿನಪತ್ರಿಕೆಯು ಎಕ್ಸೆಲ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಜಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ ನೆನಪುಗಳು ಇನ್ನು ಹಸಿರಾಗಿರುವಾಗಲೇ ಮತ್ತೊಂದು ಪ್ರಶಸ್ತಿಯ ಗರಿ ಮೂಡಿರುವುದು ಎಲ್ಲೆಡೆ ಸಂತಸಕ್ಕೆ ಕಾರಣವಾಗಿದೆ.

ಮಂಗಳೂರಿನ ವಿದ್ಯಾರ್ಥಿ ಸೋಶಿಯಲ್ ಎಜುಕೇಶನ್ ಸೊಸೈಟಿಯು ಸುಮಂತ್ ಕುಮಾರ್ ಜೈನ್ ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ 2026 ನೇ ಸಾಲಿನ ವಿದ್ಯಾ ಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

ವಿದ್ಯಾರ್ಥಿ ಸೋಶಿಯಲ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಶ್ರೀನಿವಾಸರವರು ಎಕ್ಸೆಲ್ ಸಂಸ್ಥೆಗೆ ಬಂದು ಸುಮಂತ್ ಕುಮಾರ್ ಜೈನ್ ಅವರಿಗೆ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.

“ಕರ್ನಾಟಕದಲ್ಲಿ ಕೇವಲ ಇಬ್ಬರು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು ಅದರಲ್ಲಿ ಒಬ್ಬರು ಸುಮಂತ್ ಕುಮಾರ್ ಜೈನ್ ಎಂಬುದು ಅತ್ಯಂತ ವಿಶೇಷ. ಶೈಕ್ಷಣಿಕ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ವಿಚಾರ” ಎಂದು ಶ್ರೀನಿವಾಸ್ ರವರು ಹೇಳಿದರು.

“ಪ್ರಶಸ್ತಿಗಳು ತಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ನನ್ನ ಕನಸುಗಳಿಗೆ ಬೆಂಬಲವಾಗಿ ನಿಂತಿರುವವರು ಪ್ರಾಚಾರ್ಯರು, ಬೋಧಕ ಸಿಬ್ಬಂದಿ ಮತ್ತು ಬೋಧಕೇತನ ಸಿಬ್ಬಂದಿಯವರು. ಎಲ್ಲರ ಸಹಕಾರದಿಂದ ನಾನು ಮತ್ತಷ್ಟು ನಿಸ್ವಾರ್ಥ ಸೇವೆಯನ್ನು ಮಾಡುತ್ತೇನೆ” ಎಂದು ಪ್ರಶಸ್ತಿಯನ್ನು ಸ್ವೀಕರಿಸಿದ ಸುಮಂತ್ ಕುಮಾರ್ ಜೈನ್ ಭರವಸೆಯ ಮಾತುಗಳನ್ನಾಡಿದರು.
ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ರಾಜೇಂದ್ರ ಭಟ್, ಪ್ರಾಚಾರ್ಯರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್ ಉಪಪ್ರಾಚಾರ್ಯರ ರೋಹಿತ್ ಕುಮಾರ್ ಮತ್ತು ಹರೀಶ್,ಕೀರ್ತಿನಿಧಿ ಜೈನ್, ಸಂಯೋಜಕರಾದ ನಿಶಾ ಪೂಜಾರಿ, ಶ್ರೀನಿಧಿ, ನಿಲಯ ಮೇಲ್ವಿಚಾರಕರಾದ ಮಲ್ಲೇಶ್ ಜೈನ್, ವಿಭಾಗದ ಮುಖ್ಯಸ್ಥರು, ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು, ಪೋಷಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

Related posts

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya
error: Content is protected !!