July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

ವೇಣೂರು : ಪ್ರಮೋದ್ ಶೆಟ್ಟಿ ಸಿರಿಮನೆ ಟ್ರೇಡರ್ಸ್ ಮಾಲಕರು ಅವರ ಪುತ್ರಿ ಸೃಷ್ಟಿ ಅವರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಮಾಂಟೇಸರಿ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಮ್ಮ ಶಾಲೆಯ ಮೇಲಿನ ಅಭಿಮಾನ, ಪ್ರೀತಿ ಹಾಗೂ ಸಾಮಾಜಿಕ ಕಳಕಳಿಯ ಸಂಕೇತವಾಗಿ ಶಾಲೆಯ ಉಪಯೋಗಕ್ಕಾಗಿ ಎರಡು ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ.

ಅವರ ಈ ಉದಾರ, ಶ್ಲಾಘನೀಯ ಕೊಡುಗೆಯನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಶಾಲಾ ಸಂಸ್ಥಾಪಕ ಗಿರೀಶ್ ಕೆ. ಎಚ್., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್. ಎನ್., ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಸೌಮ್ಯ ಅವರು ಶ್ರೀ ಪ್ರಮೋದ್ ಶೆಟ್ಟಿ ಹಾಗೂ ಕುಮಾರಿ ಸೃಷ್ಟಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉದಾರ ಸಹಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಇಂತಹ ಸಮಾಜಮುಖಿ ಸಹಕಾರ ಮತ್ತು ಶಿಕ್ಷಣ ಸಂಸ್ಥೆಗಳ ಮೇಲಿನ ಕಾಳಜಿಯು ಇತರರಿಗೂ ಪ್ರೇರಣೆಯಾಗಲಿ ಎಂದು ಸಂಸ್ಥೆಯ ವತಿಯಿಂದ ಶುಭ ಹಾರೈಸಲಾಯಿತು.

Related posts

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya
error: Content is protected !!