22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

ವೇಣೂರು : ಪ್ರಮೋದ್ ಶೆಟ್ಟಿ ಸಿರಿಮನೆ ಟ್ರೇಡರ್ಸ್ ಮಾಲಕರು ಅವರ ಪುತ್ರಿ ಸೃಷ್ಟಿ ಅವರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಮಾಂಟೇಸರಿ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಮ್ಮ ಶಾಲೆಯ ಮೇಲಿನ ಅಭಿಮಾನ, ಪ್ರೀತಿ ಹಾಗೂ ಸಾಮಾಜಿಕ ಕಳಕಳಿಯ ಸಂಕೇತವಾಗಿ ಶಾಲೆಯ ಉಪಯೋಗಕ್ಕಾಗಿ ಎರಡು ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ.

ಅವರ ಈ ಉದಾರ, ಶ್ಲಾಘನೀಯ ಕೊಡುಗೆಯನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಶಾಲಾ ಸಂಸ್ಥಾಪಕ ಗಿರೀಶ್ ಕೆ. ಎಚ್., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್. ಎನ್., ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಸೌಮ್ಯ ಅವರು ಶ್ರೀ ಪ್ರಮೋದ್ ಶೆಟ್ಟಿ ಹಾಗೂ ಕುಮಾರಿ ಸೃಷ್ಟಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉದಾರ ಸಹಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಇಂತಹ ಸಮಾಜಮುಖಿ ಸಹಕಾರ ಮತ್ತು ಶಿಕ್ಷಣ ಸಂಸ್ಥೆಗಳ ಮೇಲಿನ ಕಾಳಜಿಯು ಇತರರಿಗೂ ಪ್ರೇರಣೆಯಾಗಲಿ ಎಂದು ಸಂಸ್ಥೆಯ ವತಿಯಿಂದ ಶುಭ ಹಾರೈಸಲಾಯಿತು.

Related posts

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya
error: Content is protected !!