29 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

ಸವಣಾಲು : 2026- 27 ನೇ ಶೈಕ್ಷಣಿಕ ವರ್ಷದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ ಮತ್ತು ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಜು. 6ರಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದ್ಘಾಟಕರಾಗಿ ಗ್ರಾಮ ಪಂಚಾಯಿತಿ ಮೇಲಂತಬೆಟ್ಟು ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಅವರು ಪ್ರಮಾಣ ವಚನ ಬೋಧಿಸಿ ಮಾತನಾಡಿ ಸಹಪಠ್ಯ ಚಟುವಟಿಕೆಗಳು, ಮಕ್ಕಳಲ್ಲಿ ನಾಯಕತ್ವ ಗುಣ, ಹೊಂದಾಣಿಕೆಯಂತಹ ಗುಣಗಳನ್ನು ಮೈಗೂಡಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಇದು ಕಲಿಕೆಗೆ ಪ್ರೇರಣೆಯನ್ನು ನೀಡುವುದರೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೂ ಸಹಕಾರಿಯಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ದಯಾನಂದ ರೈಯವರು ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ತವ್ಯ ಬೋಧನೆಯನ್ನು ಶಾಲಾಡಳಿತ ಸಮಿತಿಯ ಸದಸ್ಯ ಶಿವಪ್ರಸಾದ್ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಮಮತಾ. ಎಸ್ ಸ್ವಾಗತಿಸಿದರು. ಶಿಕ್ಷಕಿ ಕುl ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸೌಮ್ಯ ಧನ್ಯವಾದ ನೀಡಿದರು. ಶಿಕ್ಷಕಿಯರಾದ ಸುಜಾತ ಮತ್ತು ವೈಶಾಲಿ ಕಾರ್ಯಕ್ರಮಕ್ಕೆ ಸಹಕರಿಸಿ ಯಶಸ್ವಿಗೊಳಿಸಿದರು.

Related posts

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya
error: Content is protected !!