July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

ಉಜಿರೆ: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ ಉಜಿರೆ ಇವರ ವತಿಯಿಂದ ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ ಶ್ರೀನಿವಾಸ ಪೂಜಾರಿ ಪೆರ್ಮುದೆ, ಕೊಯ್ಯೂರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ ಮಹತ್ವವನ್ನು ವಿವರಿಸಿದ ಅವರು, ಪೌಷ್ಟಿಕಾಂಶಯುಕ್ತ ಸಾಂಪ್ರದಾಯಿಕ ಆಹಾರಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಆಸರೆ ಸದಸ್ಯರು ತಯಾರಿಸಿ ತಂದ ವಿವಿಧ ಬಗೆಯ ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಸವಿದು ಸಂಭ್ರಮಿಸಿದರು. ಆಟಿ ತಿಂಗಳ ಆಚರಣೆಗಳ ಹಿಂದಿರುವ ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಯಿತು.

ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಕೆ. ಕರುಣಾಕರ ಜೈನ್ ಶ್ರೀಮತಿ ಅನಸೂಯಾ ರೈ ಹಾಗೂ ಸುರೇಶ್ ಗೌಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸರೆ ಸಂಘದ ಅಧ್ಯಕ್ಷರಾದ ಪ್ರಶಾಂತ್ ಕುದ್ಯಾಡಿ ಸ್ಬಾಗತಿಸಿ, ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ವನ್ನು ಗೌತಮ್ ಕುಕ್ಕಾನ್ ನಿರ್ವಹಿಸಿದರು.

Related posts

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya
error: Content is protected !!