28.8 C
ಪುತ್ತೂರು, ಬೆಳ್ತಂಗಡಿ
August 23, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

ಬೆಳ್ತಂಗಡಿ: ಜು.5ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡವು ಅದ್ಭುತ ಪ್ರದರ್ಶನ ನೀಡಿ ಪ್ರಥಮ ಬಹುಮಾನ ಹಾಗೂ ರೂ.25,000 ನಗದು ಬಹುಮಾನ ತನ್ನದಾಗಿಸಿಕೊಂಡಿತು.

ಕೇವಲ 3 ತಿಂಗಳ ಹಿಂದೆ ಆರಂಭವಾದ ಈ ತಂಡ, ನಿರಂತರ ಅಭ್ಯಾಸ, ಶಿಸ್ತು, ಪರಿಶ್ರಮ ಮತ್ತು ತಂಡದ ಒಗ್ಗಟ್ಟಿನ ಬಲದಿಂದ ಅಲ್ಪ ಅವಧಿಯಲ್ಲೇ ಈ ಮಹತ್ವದ ಸಾಧನೆಯನ್ನು ದಾಖಲಿಸಿದೆ. ಪ್ರತಿಯೊಬ್ಬ ಸದಸ್ಯರ ಸಮರ್ಪಣೆ, ಸಂಯೋಜಕರ ಶ್ರಮ ಹಾಗೂ ಹಿರಿಯರ ಆಶೀರ್ವಾದದಿಂದ ಈ ವಿಜಯ ಸಾಧ್ಯವಾಯಿತು.

ಈ ಸಾಧನೆಯ ಹಿಂದೆ ಹಾಡು ಮತ್ತು ಕುಣಿತ ಸಂಯೋಜಕರ ಶ್ರಮ ಅತ್ಯಂತ ಮಹತ್ವದ್ದಾಗಿದೆ. ತಂಡದ ಪ್ರತಿಯೊಬ್ಬ ಸದಸ್ಯರೂ ತಮ್ಮ ಪ್ರತಿಭೆ, ಶಿಸ್ತು ಮತ್ತು ಸಮರ್ಪಣೆಯಿಂದ ವೇದಿಕೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ತಂಡದ ಸದಸ್ಯರು: ಸುನಿಲ್ ದೇವಾಡಿಗ ಉಜಿರೆ (ಹಾಡು ಸಂಯೋಜಕರು), ಶಿವಶಂಕರ್ ಗೇರುಕಟ್ಟೆ (ಹಾಡು ಸಂಯೋಜಕರು), ಅನ್ವಿತ್ ಬೆಳ್ತಂಗಡಿ (ಕುಣಿತ ಸಂಯೋಜಕರು), ಆಯುಷ್ ನಾಳ, ಹರ್ಷಿಣಿ ಶೆಟ್ಟಿ ನಾವೂರು, ತೃಷ ನಾವೂರು, ಉದಿತ್ ಉಜಿರೆ, ಮಾನ್ಯ ಕೋಟ್ಯಾನ್ ಉಜಿರೆ, ಕೃತಿ ಉಜಿರೆ, ಭೂಷಣ್ ಶೆಟ್ಟಿಗಾರ್ ಉಜಿರೆ, ಧನ್ವಿ ಉಜಿರೆ, ಸಿಂಚನ ಉಜಿರೆ, ದೀಕ್ಷಾ ಉಜಿರೆ, ಸಮನ್ವಿ ಉಜಿರೆ

ತಂಡದ ಈ ಯಶಸ್ಸಿಗೆ ಸಹಕರಿಸಿದ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ, ತೀರ್ಪುಗಾರರು, ಸಂಘಟಕರು, ದಾನಿಗಳು, ಅಭಿಮಾನಿಗಳು ಹಾಗೂ ಪ್ರತಿಯೊಬ್ಬ ಬೆಂಬಲಿಗರಿಗೂ ತಂಡವು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

“ಕೇವಲ ಮೂರು ತಿಂಗಳ ಪಯಣ… ಆದರೆ ಮೂರು ತಿಂಗಳ ಪರಿಶ್ರಮಕ್ಕೆ ಸಿಕ್ಕ ಮೊದಲ ದೊಡ್ಡ ಗೆಲುವು. ಇದು ಅಂತ್ಯವಲ್ಲ, ಇನ್ನೂ ಅನೇಕ ಸಾಧನೆಗಳ ಆರಂಭ.”

Related posts

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!