23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

ವೇಣೂರು : ಪ್ರಮೋದ್ ಶೆಟ್ಟಿ ಸಿರಿಮನೆ ಟ್ರೇಡರ್ಸ್ ಮಾಲಕರು ಅವರ ಪುತ್ರಿ ಸೃಷ್ಟಿ ಅವರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಮಾಂಟೇಸರಿ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಮ್ಮ ಶಾಲೆಯ ಮೇಲಿನ ಅಭಿಮಾನ, ಪ್ರೀತಿ ಹಾಗೂ ಸಾಮಾಜಿಕ ಕಳಕಳಿಯ ಸಂಕೇತವಾಗಿ ಶಾಲೆಯ ಉಪಯೋಗಕ್ಕಾಗಿ ಎರಡು ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ.

ಅವರ ಈ ಉದಾರ, ಶ್ಲಾಘನೀಯ ಕೊಡುಗೆಯನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಶಾಲಾ ಸಂಸ್ಥಾಪಕ ಗಿರೀಶ್ ಕೆ. ಎಚ್., ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್. ಎನ್., ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಸೌಮ್ಯ ಅವರು ಶ್ರೀ ಪ್ರಮೋದ್ ಶೆಟ್ಟಿ ಹಾಗೂ ಕುಮಾರಿ ಸೃಷ್ಟಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉದಾರ ಸಹಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಇಂತಹ ಸಮಾಜಮುಖಿ ಸಹಕಾರ ಮತ್ತು ಶಿಕ್ಷಣ ಸಂಸ್ಥೆಗಳ ಮೇಲಿನ ಕಾಳಜಿಯು ಇತರರಿಗೂ ಪ್ರೇರಣೆಯಾಗಲಿ ಎಂದು ಸಂಸ್ಥೆಯ ವತಿಯಿಂದ ಶುಭ ಹಾರೈಸಲಾಯಿತು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya
error: Content is protected !!