ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಎಂಬ ವಿಷಯದ ಕುರಿತು ಹೆಣ್ಣು ಮಕ್ಕಳಿಗೆ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಜು.6ರಂದು ಹಮ್ಮಿಕೊಳ್ಳಲಾಯಿತು.

ತಾಲೂಕು ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಬೇಕಾದ ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ಸಮಯದಲ್ಲಿ ಅನುಸರಿಸಬೇಕಾದ ಆರೋಗ್ಯದ ಕ್ರಮಗಳು, ಪೌಷ್ಟಿಕ ಆಹಾರ, ರಕ್ತ ಹೀನತೆ ತಡೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ವoದನೀಯ ಭಗಿನಿ ಮೊಲಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.














