25.7 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

ಸವಣಾಲು : 2026- 27 ನೇ ಶೈಕ್ಷಣಿಕ ವರ್ಷದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ ಮತ್ತು ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಜು. 6ರಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದ್ಘಾಟಕರಾಗಿ ಗ್ರಾಮ ಪಂಚಾಯಿತಿ ಮೇಲಂತಬೆಟ್ಟು ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಅವರು ಪ್ರಮಾಣ ವಚನ ಬೋಧಿಸಿ ಮಾತನಾಡಿ ಸಹಪಠ್ಯ ಚಟುವಟಿಕೆಗಳು, ಮಕ್ಕಳಲ್ಲಿ ನಾಯಕತ್ವ ಗುಣ, ಹೊಂದಾಣಿಕೆಯಂತಹ ಗುಣಗಳನ್ನು ಮೈಗೂಡಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಇದು ಕಲಿಕೆಗೆ ಪ್ರೇರಣೆಯನ್ನು ನೀಡುವುದರೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೂ ಸಹಕಾರಿಯಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ದಯಾನಂದ ರೈಯವರು ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ತವ್ಯ ಬೋಧನೆಯನ್ನು ಶಾಲಾಡಳಿತ ಸಮಿತಿಯ ಸದಸ್ಯ ಶಿವಪ್ರಸಾದ್ ಬೋಧಿಸಿದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಮಮತಾ. ಎಸ್ ಸ್ವಾಗತಿಸಿದರು. ಶಿಕ್ಷಕಿ ಕುl ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸೌಮ್ಯ ಧನ್ಯವಾದ ನೀಡಿದರು. ಶಿಕ್ಷಕಿಯರಾದ ಸುಜಾತ ಮತ್ತು ವೈಶಾಲಿ ಕಾರ್ಯಕ್ರಮಕ್ಕೆ ಸಹಕರಿಸಿ ಯಶಸ್ವಿಗೊಳಿಸಿದರು.

Related posts

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!