ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶ್ರಯದಂತೆ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ ಜುಲೈ 7ರಂದು ಜರಗಿತು.

ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರೋಟೋರಿಯನ್ ಬಿ ಸೋಮಶೇಖರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಯುವಜನತೆ ಹಾದಿ ತಪ್ಪುವ ಸಂದರ್ಭ ಯಾವ ರೀತಿ ವಿದ್ಯಾರ್ಥಿಗಳು ಮುಂಜಾಗ್ರತೆ ವಹಿಸಬೇಕು. ಸ್ವಯಂ ಸಂಕಲ್ಪ ಮಾಡುವ ಮೂಲಕ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ ಯುವ ಜನತೆ,ಕ್ಷುಲ್ಲಕ ಕಾರಣ,ಆತುರದ ನಿರ್ಧಾರ ,ಸಹಪಾಠಿಗಳ,ಮಿತ್ರರ ಒತ್ತಾಯಕ್ಕೆ ಕಟ್ಟು ಬಿದ್ದು, ದುಶ್ಚಟ ಕ್ಕೆ ಬಲಿಯಾಗಿ,ಕ್ಷಣಿಕವಾದ ಸುಖಕ್ಕೆ,ಶಾಶ್ವತವಾದ ಸುಖ ವನ್ನು,ಕಳೆದುಕೊಂಡು ಜೀವನವನ್ನು,ಭವಿಷ್ಯವನ್ನು ಹಾಳುಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು. ಆರೋಗ್ಯಕರ ಜೀವನಶೈಲಿ ಸ್ವಚ್ಛತೆ ಮತ್ತು ನೈತಿಕ ಮೌಲ್ಯಗಳನ್ನು ಸಂಸ್ಕಾರ ಹಿತ ಜೀವನವನ್ನು ನಿಮ್ಮ ಜೀವನದಲ್ಲಿ ಅಳವಡಿಸಿ ಎಂದು ಕರೆ ನೀಡಿದರು.
ಮಾದಕ ವ್ಯಸನ, ದುಶ್ಚಟ ಮತ್ತು ಸಾಮಾಜಿಕ ಅನಿಷ್ಠಗಳಿಂದ ದೂರವಿರುತ್ತೇನೆ ಎಂದು ವಿದ್ಯಾರ್ಥಿಗಳು ಪ್ರಮಾಣ ಮಾಡಿದರು ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲಾಯಿತು ಕಾರ್ಯಕ್ರಮದ ನಿರೂಪಣೆಯನ್ನು ಪೂಜಾ ನಿರ್ವಹಿಸಿದರು















