23.2 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

ಬೆಳ್ತಂಗಡಿ: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾದ ಅಕ್ಯುಪ್ರೆಶರ್ ಹಾಗೂ ಮರ್ಮಬಿಂದು ಕಾರ್ಯಾಗಾರದಲ್ಲಿ ಔಷಧ ರಹಿತ ಚಿಕಿತ್ಸಾ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಗಾಗಿ ಅಳದಂಗಡಿಯ ಕಲರ್ ಥೆರಪಿಸ್ಟ್ ಸುಕೇಶ್ ಕುಮಾರ್ ಜೈನ್ ಅವರಿಗೆ “ಆರೋಗ್ಯ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುಕೇಶ್ ಕುಮಾರ್ ಜೈನ್ ಅವರು ಗ್ರಾಮೀಣ ಹಾಗೂ ನಗರ ಪ್ರದೇಶದ ಅನೇಕ ಜನರಿಗೆ ಔಷಧ ರಹಿತ ಚಿಕಿತ್ಸೆಯ ಮೂಲಕ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದು, ಜನಮನ್ನಣೆ ಗಳಿಸಿದ್ದಾರೆ.

ಇವರಲ್ಲಿ ಕಲರ್ ಥೆರಪಿ, ಅಕ್ಯುಪ್ರೆಶರ್, ಮರ್ಮ ಪಾಯಿಂಟ್ ಥೆರಪಿ, ಸೀಡ್ ಥೆರಪಿ, ರೇಖೆ ಹೀಲಿಂಗ್ ಸೇರಿದಂತೆ ವಿವಿಧ ಪರ್ಯಾಯ ಚಿಕಿತ್ಸೆಗಳು ಲಭ್ಯವಿದ್ದು, ಆರೋಗ್ಯ ಜಾಗೃತಿ ಮತ್ತು ಸೇವೆಯ ಮೂಲಕ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಸುಕೇಶ್ ಕುಮಾರ್ ಜೈನ್ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿ ಅಭಿನಂದಿಸಿದರು.

Related posts

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!