24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

ಬೆಳ್ತಂಗಡಿ: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾದ ಅಕ್ಯುಪ್ರೆಶರ್ ಹಾಗೂ ಮರ್ಮಬಿಂದು ಕಾರ್ಯಾಗಾರದಲ್ಲಿ ಔಷಧ ರಹಿತ ಚಿಕಿತ್ಸಾ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಗಾಗಿ ಅಳದಂಗಡಿಯ ಕಲರ್ ಥೆರಪಿಸ್ಟ್ ಸುಕೇಶ್ ಕುಮಾರ್ ಜೈನ್ ಅವರಿಗೆ “ಆರೋಗ್ಯ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುಕೇಶ್ ಕುಮಾರ್ ಜೈನ್ ಅವರು ಗ್ರಾಮೀಣ ಹಾಗೂ ನಗರ ಪ್ರದೇಶದ ಅನೇಕ ಜನರಿಗೆ ಔಷಧ ರಹಿತ ಚಿಕಿತ್ಸೆಯ ಮೂಲಕ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದು, ಜನಮನ್ನಣೆ ಗಳಿಸಿದ್ದಾರೆ.

ಇವರಲ್ಲಿ ಕಲರ್ ಥೆರಪಿ, ಅಕ್ಯುಪ್ರೆಶರ್, ಮರ್ಮ ಪಾಯಿಂಟ್ ಥೆರಪಿ, ಸೀಡ್ ಥೆರಪಿ, ರೇಖೆ ಹೀಲಿಂಗ್ ಸೇರಿದಂತೆ ವಿವಿಧ ಪರ್ಯಾಯ ಚಿಕಿತ್ಸೆಗಳು ಲಭ್ಯವಿದ್ದು, ಆರೋಗ್ಯ ಜಾಗೃತಿ ಮತ್ತು ಸೇವೆಯ ಮೂಲಕ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಸುಕೇಶ್ ಕುಮಾರ್ ಜೈನ್ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿ ಅಭಿನಂದಿಸಿದರು.

Related posts

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya
error: Content is protected !!