24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಮಚ್ಚಿನ : ಸ.ಉ.ಪ್ರಾ. ಶಾಲೆ ಮಚ್ಚಿನ ಇಲ್ಲಿ ನವಮಂಗಳೂರು ಬಂದರು ಪ್ರಾಧಿಕಾರ ಇವರ ಸಿಎಸ್ ಆರ್ ನಿಧಿಯ ಸಹಕಾರದಿಂದ ನಿರ್ಮಿಸಲಾದ 2 ತರಗತಿ ಕೊಠಡಿಗಳು, ತಾ.ಪಂ. ಅನುದಾನದಲ್ಲಿ ನಿರ್ಮಿಸಿದ ಗ್ರಂಥಾಲಯ ಕೊಠಡಿ ಹಾಗೂ ರಾಜ್ಯ ಸಭಾ ಸದಸ್ಯರು ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಿಂದ ಮಂಜೂರುಗೊಂಡ ಸ್ಮಾರ್ಟ್ ಬೋರ್ಡ್ ನ ಉದ್ಘಾಟನಾ ಸಮಾರಂಭವು ಜು.7ರಂದು ನಡೆಯಿತು.

ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ರವರು ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ ಹಾಗೂ ಶಾಲೆಗಳಲ್ಲಿ ಕಲಿಯುತ್ತಿರುವ ಗ್ರಾಮೀಣ ಮಕ್ಕಳ ಶಿಕ್ಷಣದ ಗುಣಮಟ್ಟವೂ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಡಾ. ರಾಜರ್ಷಿ ಬಿ., ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕುಮಾರ್, ಹರ್ಷ ಸಂಪಿಗೆತ್ತಾಯ, ನಾಮನಿರ್ದೇಶಿತ ಸದಸ್ಯರಾದ ಪ್ರಮೋದ್ ಕುಮಾರ್, ಸೃಷ್ಟಿ ಕನ್ಸಷ್ಟ್ರನ್ ಇಂಜಿನಿಯರ್ ರಾದ ಯತೀಶ್ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ, ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಕೆ. , ಊರ ವಿದ್ಯಾಭಿಮಾನಿಗಳು, ಪೋಷಕರು, ವಿದ್ಯಾರ್ಥಿಗಳು, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya
error: Content is protected !!