August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

ಬೆಳ್ತಂಗಡಿ: ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ‌ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರಿ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಬಿ.ಎಲ್.ಒ‌ ಮಾಧವ ಎಂಬರೊಂದಿಗೆ ಜು.6 ರಂದು ಬೆಳಗ್ಗೆ 11:30 ಕ್ಕೆ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಇಲ್ಲಿಗೆ ಬರುವುದಿಲ್ಲ” ಎಂದು ಹೇಳಿದ್ದು ಮನೆಯ ಸಿಟ್ ಔಟ್ ಗೆ ಪ್ರವೇಶ ನೀಡದೆ ಮೆಟ್ಟಿಲು ಬಳಿಯೇ ಮಾತಿನಲ್ಲಿಯೇ ತಡೆದು ಯಶೋಧ ಆಚಾರಿ ನಿಲ್ಲಿಸಿ ಅಪಮಾನ ಮಾಡಿ ಜಾತಿ ನಿಂದನೆ ಮಾಡಿರುವುದಾಗಿ ಜು.7 ರಂದು ದೂರು ನೀಡಿದ್ದಾರೆ.

ಬಿ.ಎಲ್.ಒ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಆರೋಪಿ ಯಶೋಧ ಆಚಾರಿ ವಿರುದ್ಧ ಜು.7 ರಂದು ಸಂಜೆ SC/ST act-2015(u/s-3(1)(r),3(2)(va)) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya
error: Content is protected !!