ಇಳಂತಿಲ: ಇಳಂತಿಲ ಈಶ್ವರಿ ಸಂಜೀವಿನಿ ಒಕ್ಕೂಟ ಹಾಗೂ ಕೊಕ್ಕಡ ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಾಗಾರ ಒಕ್ಕೂಟದ ಅಧ್ಯಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ವಿಜಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃಷಿ ಇಲಾಖೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಸಾಯಿನಾಥ್, ಎನ್ಆರ್ಎಲ್ಎಮ್ ಬೆಳ್ತಂಗಡಿ ತಾಲೂಕು ವ್ಯವಸ್ಥಾಪಕಿ ಪ್ರತಿಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ.ಹಾಗೂ ಒಕ್ಕೂಟ ಉಪಾಧ್ಯಕ್ಷೆ ಚಿನ್ನಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಲೈಮಾನ್ ಅಣಬೆ ಕೃಷಿಯ ಮಾಹಿತಿ ನೀಡಿದರು. ಸಂಜೀವಿನಿ ಸ್ವ ಸಹಾಯ ಸಂಘದ ಸದಸ್ಯರುಗಳು ಈ ತರಬೇತಿಯಲ್ಲಿ ಭಾಗವಹಿಸಿದ್ದರು. ಕೃಷಿ ಸಖಿ ಕುಸುಮ ವಂದಿಸಿ, ಎಂಬಿಕೆ ಕಾರ್ಯಕ್ರಮ ನಿರ್ವಹಿಸಿದರು.















