28.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ: ಕ್ಷಣಿಕ ಸುಖಕ್ಕೆ, ಶಾಶ್ವತ ಸುಖ ಕಳೆದು ಕೊಳ್ಳಬೇಡಿ: ಬಿ. ಸೋಮಶೇಖರ ಶೆಟ್ಟಿ

ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶ್ರಯದಂತೆ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ ಜುಲೈ 7ರಂದು ಜರಗಿತು.

ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರೋಟೋರಿಯನ್ ಬಿ ಸೋಮಶೇಖರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಯುವಜನತೆ ಹಾದಿ ತಪ್ಪುವ ಸಂದರ್ಭ ಯಾವ ರೀತಿ ವಿದ್ಯಾರ್ಥಿಗಳು ಮುಂಜಾಗ್ರತೆ ವಹಿಸಬೇಕು. ಸ್ವಯಂ ಸಂಕಲ್ಪ ಮಾಡುವ ಮೂಲಕ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ ಯುವ ಜನತೆ,ಕ್ಷುಲ್ಲಕ ಕಾರಣ,ಆತುರದ ನಿರ್ಧಾರ ,ಸಹಪಾಠಿಗಳ,ಮಿತ್ರರ ಒತ್ತಾಯಕ್ಕೆ ಕಟ್ಟು ಬಿದ್ದು, ದುಶ್ಚಟ ಕ್ಕೆ ಬಲಿಯಾಗಿ,ಕ್ಷಣಿಕವಾದ ಸುಖಕ್ಕೆ,ಶಾಶ್ವತವಾದ ಸುಖ ವನ್ನು,ಕಳೆದುಕೊಂಡು ಜೀವನವನ್ನು,ಭವಿಷ್ಯವನ್ನು ಹಾಳುಮಾಡಿಕೊಳ್ಳದಂತೆ ಎಚ್ಚರ ವಹಿಸಬೇಕು. ಆರೋಗ್ಯಕರ ಜೀವನಶೈಲಿ ಸ್ವಚ್ಛತೆ ಮತ್ತು ನೈತಿಕ ಮೌಲ್ಯಗಳನ್ನು ಸಂಸ್ಕಾರ ಹಿತ ಜೀವನವನ್ನು ನಿಮ್ಮ ಜೀವನದಲ್ಲಿ ಅಳವಡಿಸಿ ಎಂದು ಕರೆ ನೀಡಿದರು.

ಮಾದಕ ವ್ಯಸನ, ದುಶ್ಚಟ ಮತ್ತು ಸಾಮಾಜಿಕ ಅನಿಷ್ಠಗಳಿಂದ ದೂರವಿರುತ್ತೇನೆ ಎಂದು ವಿದ್ಯಾರ್ಥಿಗಳು ಪ್ರಮಾಣ ಮಾಡಿದರು ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲಾಯಿತು ಕಾರ್ಯಕ್ರಮದ ನಿರೂಪಣೆಯನ್ನು ಪೂಜಾ ನಿರ್ವಹಿಸಿದರು

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya
error: Content is protected !!