24.1 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

ಬೆಳ್ತಂಗಡಿ: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾದ ಅಕ್ಯುಪ್ರೆಶರ್ ಹಾಗೂ ಮರ್ಮಬಿಂದು ಕಾರ್ಯಾಗಾರದಲ್ಲಿ ಔಷಧ ರಹಿತ ಚಿಕಿತ್ಸಾ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಗಾಗಿ ಅಳದಂಗಡಿಯ ಕಲರ್ ಥೆರಪಿಸ್ಟ್ ಸುಕೇಶ್ ಕುಮಾರ್ ಜೈನ್ ಅವರಿಗೆ “ಆರೋಗ್ಯ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುಕೇಶ್ ಕುಮಾರ್ ಜೈನ್ ಅವರು ಗ್ರಾಮೀಣ ಹಾಗೂ ನಗರ ಪ್ರದೇಶದ ಅನೇಕ ಜನರಿಗೆ ಔಷಧ ರಹಿತ ಚಿಕಿತ್ಸೆಯ ಮೂಲಕ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದು, ಜನಮನ್ನಣೆ ಗಳಿಸಿದ್ದಾರೆ.

ಇವರಲ್ಲಿ ಕಲರ್ ಥೆರಪಿ, ಅಕ್ಯುಪ್ರೆಶರ್, ಮರ್ಮ ಪಾಯಿಂಟ್ ಥೆರಪಿ, ಸೀಡ್ ಥೆರಪಿ, ರೇಖೆ ಹೀಲಿಂಗ್ ಸೇರಿದಂತೆ ವಿವಿಧ ಪರ್ಯಾಯ ಚಿಕಿತ್ಸೆಗಳು ಲಭ್ಯವಿದ್ದು, ಆರೋಗ್ಯ ಜಾಗೃತಿ ಮತ್ತು ಸೇವೆಯ ಮೂಲಕ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಸುಕೇಶ್ ಕುಮಾರ್ ಜೈನ್ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿ ಅಭಿನಂದಿಸಿದರು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya
error: Content is protected !!