24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

ಬೆಳ್ತಂಗಡಿ: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾದ ಅಕ್ಯುಪ್ರೆಶರ್ ಹಾಗೂ ಮರ್ಮಬಿಂದು ಕಾರ್ಯಾಗಾರದಲ್ಲಿ ಔಷಧ ರಹಿತ ಚಿಕಿತ್ಸಾ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಗಾಗಿ ಅಳದಂಗಡಿಯ ಕಲರ್ ಥೆರಪಿಸ್ಟ್ ಸುಕೇಶ್ ಕುಮಾರ್ ಜೈನ್ ಅವರಿಗೆ “ಆರೋಗ್ಯ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುಕೇಶ್ ಕುಮಾರ್ ಜೈನ್ ಅವರು ಗ್ರಾಮೀಣ ಹಾಗೂ ನಗರ ಪ್ರದೇಶದ ಅನೇಕ ಜನರಿಗೆ ಔಷಧ ರಹಿತ ಚಿಕಿತ್ಸೆಯ ಮೂಲಕ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದು, ಜನಮನ್ನಣೆ ಗಳಿಸಿದ್ದಾರೆ.

ಇವರಲ್ಲಿ ಕಲರ್ ಥೆರಪಿ, ಅಕ್ಯುಪ್ರೆಶರ್, ಮರ್ಮ ಪಾಯಿಂಟ್ ಥೆರಪಿ, ಸೀಡ್ ಥೆರಪಿ, ರೇಖೆ ಹೀಲಿಂಗ್ ಸೇರಿದಂತೆ ವಿವಿಧ ಪರ್ಯಾಯ ಚಿಕಿತ್ಸೆಗಳು ಲಭ್ಯವಿದ್ದು, ಆರೋಗ್ಯ ಜಾಗೃತಿ ಮತ್ತು ಸೇವೆಯ ಮೂಲಕ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಸುಕೇಶ್ ಕುಮಾರ್ ಜೈನ್ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿ ಅಭಿನಂದಿಸಿದರು.

Related posts

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!