24.1 C
ಪುತ್ತೂರು, ಬೆಳ್ತಂಗಡಿ
July 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಜು.10.ರಂದು ಪೂರ್ವಾಹ್ನ 10.00 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಇಂಧನ ಇಲಾಖೆಯ ಸೌಲಭ್ಯಗಳ ಮಾಹಿತಿ, ವಿವಿಧ ವಿದ್ಯುತ್ ಸಲಕರಣೆಗಳ ಸುರಕ್ಷತಾ ಬಳಕೆ, ನಿರ್ವಹಣೆ, ದುರಸ್ತಿ, ಮಳೆಗಾಲದಲ್ಲಿ ವಿವಿಧ ವಿಪತ್ತು ನಿರ್ವಹಣೆ ಹಾಗೂ ಮೊಬೈಲ್ Starter ತಂತ್ರಜ್ಞಾನ ದ ಬಗ್ಗೆ ಒಂದು ದಿನದ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಉಜಿರೆ ಮೆಸ್ಕಾಂ ಜೂನಿಯರ್ ಎಂಜಿನಿಯರ್ ಎಸ್ ನವೀನ್ ಕುಮಾರ್, ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಉಸ್ಮಾನ್, ಹಾಗೂ ಪುತ್ತೂರು ಮಾಯಾಟ್ರೋನಿಕ್ಸ್ ಶರತ್, ನಾಗೇಶ್ ಪಿ. ರಕ್ಷಾ ಎಂಟರ್ ಪ್ರೈಸಸ್ ಉಜಿರೆ* ಇವರುಗಳು ತರಬೇತಿ ನೀಡಲಿದ್ದಾರೆ.

ರೈತ/ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ತರಬೇತಿಯಲ್ಲಿ ಭಾಗವಹಿಸುವ ರೈತ/ರೈತ ಮಹಿಳೆಯರು ಕಡ್ಡಾಯವಾಗಿ ತಮ್ಮ FID ಅಥವಾ Voter Id ಸಂಖ್ಯೆಯನ್ನು ತರುವಂತೆ ಕೋರಲಾಗಿದೆ. ತರಬೇತಿಯ ವೇಳೆ ಊಟೋಪಚಾರದ ವ್ಯವಸ್ಥೆಯನ್ನು ತರಬೇತಿ ಕೇಂದ್ರದಲ್ಲಿ ಮಾಡಲಾಗುವುದು

Related posts

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya
error: Content is protected !!