ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭವು ವಾಣಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ಜು.7ರಂದು ನೆರವೇರಿತು.
ವಿದ್ಯಾರ್ಥಿಗಳು ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮವನ್ನು ಸಿ.ಎ. ವಿ. ಸುಕನ್ಯಾ ಕಾಮತ್, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿನಿ ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣಗಳು ಭವಿಷ್ಯದ ಯಶಸ್ಸಿಗೆ ಭದ್ರ ಅಡಿಪಾಯವಾಗುತ್ತವೆ ಎಂದು ಹೇಳಿದರು.
ಮಂತ್ರಿಮಂಡಲದ ಸಂಚಾಲಕರಾದ ಶ್ರೀಮತಿ ಮಮತಾ ನೂತನ ನಾಯಕರನ್ನು ಪರಿಚಯಿಸಿದರು.
ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಉಪಾಧ್ಯಾಕ್ಷ ನಾರಾಯಣ ಗೌಡ ದೇವಸ್ಯ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿ, ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಸಲಹೆ ನೀಡಿದರು.
ವೇದಿಕೆಯಲ್ಲಿ 2025-26ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ವಾಣಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ. ಎ, ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಇವರು ಪ್ರಮಾಣ ವಚನ ಬೋದಿಸಿದರು. ನೂತನ ನಾಯಕರು ಶಾಲೆಯ ಗೌರವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.
ವಿಧ್ಯಾರ್ಥಿನಿಯರು ಪ್ರಾರ್ಥಿಸಿ, 10ನೇ ತರಗತಿ ವಿಧ್ಯಾರ್ಥಿ ವಿ ಪ್ರಸನ್ನ ಕಾಮತ್ ಸ್ವಾಗತಿಸಿ, 10ನೇ ತರಗತಿ ವಿದ್ಯಾರ್ಥಿನಿ ಕು. ಅದಿತಿ ಪೂಜಾರಿ ವಂದನಾರ್ಪಣೆಗೈದರು. 10ನೇ ತರಗತಿ ವಿದ್ಯಾರ್ಥಿಯರಾದ ತಸ್ವಿ ಎಸ್ ಮತ್ತು ಅಂಕಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.















