August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

ಬೆಳ್ತಂಗಡಿ: ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ‌ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರಿ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಬಿ.ಎಲ್.ಒ‌ ಮಾಧವ ಎಂಬರೊಂದಿಗೆ ಜು.6 ರಂದು ಬೆಳಗ್ಗೆ 11:30 ಕ್ಕೆ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಇಲ್ಲಿಗೆ ಬರುವುದಿಲ್ಲ” ಎಂದು ಹೇಳಿದ್ದು ಮನೆಯ ಸಿಟ್ ಔಟ್ ಗೆ ಪ್ರವೇಶ ನೀಡದೆ ಮೆಟ್ಟಿಲು ಬಳಿಯೇ ಮಾತಿನಲ್ಲಿಯೇ ತಡೆದು ಯಶೋಧ ಆಚಾರಿ ನಿಲ್ಲಿಸಿ ಅಪಮಾನ ಮಾಡಿ ಜಾತಿ ನಿಂದನೆ ಮಾಡಿರುವುದಾಗಿ ಜು.7 ರಂದು ದೂರು ನೀಡಿದ್ದಾರೆ.

ಬಿ.ಎಲ್.ಒ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಆರೋಪಿ ಯಶೋಧ ಆಚಾರಿ ವಿರುದ್ಧ ಜು.7 ರಂದು ಸಂಜೆ SC/ST act-2015(u/s-3(1)(r),3(2)(va)) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya
error: Content is protected !!