24.1 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

ಬೆಳ್ತಂಗಡಿ: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾದ ಅಕ್ಯುಪ್ರೆಶರ್ ಹಾಗೂ ಮರ್ಮಬಿಂದು ಕಾರ್ಯಾಗಾರದಲ್ಲಿ ಔಷಧ ರಹಿತ ಚಿಕಿತ್ಸಾ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಗಾಗಿ ಅಳದಂಗಡಿಯ ಕಲರ್ ಥೆರಪಿಸ್ಟ್ ಸುಕೇಶ್ ಕುಮಾರ್ ಜೈನ್ ಅವರಿಗೆ “ಆರೋಗ್ಯ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುಕೇಶ್ ಕುಮಾರ್ ಜೈನ್ ಅವರು ಗ್ರಾಮೀಣ ಹಾಗೂ ನಗರ ಪ್ರದೇಶದ ಅನೇಕ ಜನರಿಗೆ ಔಷಧ ರಹಿತ ಚಿಕಿತ್ಸೆಯ ಮೂಲಕ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದು, ಜನಮನ್ನಣೆ ಗಳಿಸಿದ್ದಾರೆ.

ಇವರಲ್ಲಿ ಕಲರ್ ಥೆರಪಿ, ಅಕ್ಯುಪ್ರೆಶರ್, ಮರ್ಮ ಪಾಯಿಂಟ್ ಥೆರಪಿ, ಸೀಡ್ ಥೆರಪಿ, ರೇಖೆ ಹೀಲಿಂಗ್ ಸೇರಿದಂತೆ ವಿವಿಧ ಪರ್ಯಾಯ ಚಿಕಿತ್ಸೆಗಳು ಲಭ್ಯವಿದ್ದು, ಆರೋಗ್ಯ ಜಾಗೃತಿ ಮತ್ತು ಸೇವೆಯ ಮೂಲಕ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಸುಕೇಶ್ ಕುಮಾರ್ ಜೈನ್ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿ ಅಭಿನಂದಿಸಿದರು.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya
error: Content is protected !!