24.1 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಜು.10.ರಂದು ಪೂರ್ವಾಹ್ನ 10.00 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಇಂಧನ ಇಲಾಖೆಯ ಸೌಲಭ್ಯಗಳ ಮಾಹಿತಿ, ವಿವಿಧ ವಿದ್ಯುತ್ ಸಲಕರಣೆಗಳ ಸುರಕ್ಷತಾ ಬಳಕೆ, ನಿರ್ವಹಣೆ, ದುರಸ್ತಿ, ಮಳೆಗಾಲದಲ್ಲಿ ವಿವಿಧ ವಿಪತ್ತು ನಿರ್ವಹಣೆ ಹಾಗೂ ಮೊಬೈಲ್ Starter ತಂತ್ರಜ್ಞಾನ ದ ಬಗ್ಗೆ ಒಂದು ದಿನದ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಉಜಿರೆ ಮೆಸ್ಕಾಂ ಜೂನಿಯರ್ ಎಂಜಿನಿಯರ್ ಎಸ್ ನವೀನ್ ಕುಮಾರ್, ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಉಸ್ಮಾನ್, ಹಾಗೂ ಪುತ್ತೂರು ಮಾಯಾಟ್ರೋನಿಕ್ಸ್ ಶರತ್, ನಾಗೇಶ್ ಪಿ. ರಕ್ಷಾ ಎಂಟರ್ ಪ್ರೈಸಸ್ ಉಜಿರೆ* ಇವರುಗಳು ತರಬೇತಿ ನೀಡಲಿದ್ದಾರೆ.

ರೈತ/ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ತರಬೇತಿಯಲ್ಲಿ ಭಾಗವಹಿಸುವ ರೈತ/ರೈತ ಮಹಿಳೆಯರು ಕಡ್ಡಾಯವಾಗಿ ತಮ್ಮ FID ಅಥವಾ Voter Id ಸಂಖ್ಯೆಯನ್ನು ತರುವಂತೆ ಕೋರಲಾಗಿದೆ. ತರಬೇತಿಯ ವೇಳೆ ಊಟೋಪಚಾರದ ವ್ಯವಸ್ಥೆಯನ್ನು ತರಬೇತಿ ಕೇಂದ್ರದಲ್ಲಿ ಮಾಡಲಾಗುವುದು

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya
error: Content is protected !!