23.4 C
ಪುತ್ತೂರು, ಬೆಳ್ತಂಗಡಿ
August 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು ಬೆಳ್ತಂಗಡಿ ಕಚೇರಿಯಲ್ಲಿ ಜು.9 ರಂದು ಸಂಜೆ 3 ಗಂಟೆಗೆ ಅಧಿಕಾರ ಸ್ವೀಕರಿಸಿಕೊಂಡರು.

ಈ ವೇಳೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆಯ ವರದಿಗಾರ ಮನೀಶ್ ಅಂಚನ್ ಪಾಲೇದು ಅವರು ಪತ್ರಿಕೆ‌ ನೀಡಿ ಸ್ವಾಗತಿಸಿದರು. ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ, ಹೆಚ್. ಡಿ. ಕೋಟೆ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.

Related posts

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಪ್ರತಿಜ್ಞೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!