27.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

ಮುಂಡಾಜೆ: ಮೊಬೈಲ್ ನೆಟ್ವರ್ಕ್ ಗೆ ರಸ್ತೆ ಕಾಮಗಾರಿ ಅಡ್ಡಿಯಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದ ಖಾಸಗಿ ಮೊಬೈಲ್ ಟವರ್ ನಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ. ಇಲ್ಲಿ ವಿದ್ಯುತ್ ಇದ್ದರೆ ಮಾತ್ರ ನೆಟ್ವರ್ಕ್ ಸಿಗುತ್ತದೆ. ಆದರೆ ಕಳೆದ ಕೆಲವು ದಿನಗಳಿಂದ ಮುಂಡಾಜೆ ಭಾಗದಲ್ಲಿ ವಿದ್ಯುತ್ ಸಮಸ್ಯೆ ವಿಪರೀತವಾಗಿದೆ. ಇದರಿಂದ ಇಲ್ಲಿನ ಸಾವಿರಾರು. ಗ್ರಾಹಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮೊಬೈಲ್ ಟವರ್ ಸುತ್ತ ಗಿಡಗಂಟಿ, ಬಳ್ಳಿಗಳು ಅವರಿಸಿದ್ದು, ಅವು ಟವರ್ ನ್ನು ಕೂಡ ಸುತ್ತುವರೆದಿವೆ.
ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿದಾಗ, “ನೆಟ್ವರ್ಕ್ ಸರಿಪಡಿಸಲು ರಸ್ತೆ ಅಡ್ಡಿಯಾಗಿದೆ,” ಎನ್ನುವ ರೋಚಕ ಉತ್ತರ ಲಭಿಸಿದೆ.

ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ ಟವರ್ ಬಳಿ ಗುಡ್ಡವನ್ನು ಕಡಿಯಲಾಗಿದ್ದು, ಇದರಿಂದಾಗಿ ಗುಡ್ಡದ ಮೇಲಿರುವ ಟವರ್ ಬಳಿಯಿರುವ ಜನರೇಟರ್‌ಗೆ ಇಂಧನ ಸರಬರಾಜು ಮಾಡಲು ತೊಂದರೆಯುಂಟಾಗಿ ಈ ರೀತಿ ಸಮಸ್ಯೆ ಮರುಕಳಿಸುತ್ತಿದೆ ಎನ್ನುವ ಸಮಜಾಯಿಷಿ ದೊರೆತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ. ದಿನಪೂರ್ತಿ ನೆಟ್ವರ್ಕ್ ಸಮಸ್ಯೆಯ ಪರಿಣಾಮ ಯಾವುದೇ ಕೆಲಸ ನಿರ್ವಹಿಸಲು ಅಡ್ಡಿಯಾಗಿದ್ದು, ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದನೆ ಇಲ್ಲದಂತಾಗಿದೆ.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!