24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

ಮುಂಡಾಜೆ: ಮೊಬೈಲ್ ನೆಟ್ವರ್ಕ್ ಗೆ ರಸ್ತೆ ಕಾಮಗಾರಿ ಅಡ್ಡಿಯಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದ ಖಾಸಗಿ ಮೊಬೈಲ್ ಟವರ್ ನಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ. ಇಲ್ಲಿ ವಿದ್ಯುತ್ ಇದ್ದರೆ ಮಾತ್ರ ನೆಟ್ವರ್ಕ್ ಸಿಗುತ್ತದೆ. ಆದರೆ ಕಳೆದ ಕೆಲವು ದಿನಗಳಿಂದ ಮುಂಡಾಜೆ ಭಾಗದಲ್ಲಿ ವಿದ್ಯುತ್ ಸಮಸ್ಯೆ ವಿಪರೀತವಾಗಿದೆ. ಇದರಿಂದ ಇಲ್ಲಿನ ಸಾವಿರಾರು. ಗ್ರಾಹಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮೊಬೈಲ್ ಟವರ್ ಸುತ್ತ ಗಿಡಗಂಟಿ, ಬಳ್ಳಿಗಳು ಅವರಿಸಿದ್ದು, ಅವು ಟವರ್ ನ್ನು ಕೂಡ ಸುತ್ತುವರೆದಿವೆ.
ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿದಾಗ, “ನೆಟ್ವರ್ಕ್ ಸರಿಪಡಿಸಲು ರಸ್ತೆ ಅಡ್ಡಿಯಾಗಿದೆ,” ಎನ್ನುವ ರೋಚಕ ಉತ್ತರ ಲಭಿಸಿದೆ.

ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ ಟವರ್ ಬಳಿ ಗುಡ್ಡವನ್ನು ಕಡಿಯಲಾಗಿದ್ದು, ಇದರಿಂದಾಗಿ ಗುಡ್ಡದ ಮೇಲಿರುವ ಟವರ್ ಬಳಿಯಿರುವ ಜನರೇಟರ್‌ಗೆ ಇಂಧನ ಸರಬರಾಜು ಮಾಡಲು ತೊಂದರೆಯುಂಟಾಗಿ ಈ ರೀತಿ ಸಮಸ್ಯೆ ಮರುಕಳಿಸುತ್ತಿದೆ ಎನ್ನುವ ಸಮಜಾಯಿಷಿ ದೊರೆತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ. ದಿನಪೂರ್ತಿ ನೆಟ್ವರ್ಕ್ ಸಮಸ್ಯೆಯ ಪರಿಣಾಮ ಯಾವುದೇ ಕೆಲಸ ನಿರ್ವಹಿಸಲು ಅಡ್ಡಿಯಾಗಿದ್ದು, ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದನೆ ಇಲ್ಲದಂತಾಗಿದೆ.

Related posts

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!