25.4 C
ಪುತ್ತೂರು, ಬೆಳ್ತಂಗಡಿ
July 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಆರು ಕಡೆ ಸರಣಿ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಪೊಲೀಸರು ತಮಿಳುನಾಡು ರಾಜ್ಯದ ಕೊಯಮುತ್ತೂರು ಜಿಲ್ಲೆಯ ವಿಜಯಾನ್ ಮಗ ಜಯಕುಮಾರ್(55) ಎಂಬಾತನನ್ನು ಗುರುವಾಯನಕೆರೆ ಜಂಕ್ಷನ್ ನಲ್ಲಿ ಜು.8 ರಂದು ಸಂಜೆ 6 ಗಂಟೆಗೆ ಬಂಧಿಸಿ ವಿಚಾರಣೆ ನಡೆಸಿ ಜು.9 ರಂದು ಕಳ್ಳತನ ಮಾಡಿದ ಜಾಗಗಳಲ್ಲಿ ಸ್ಥಳ ಮಹಜರು ನಡೆಸಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದಲ್ಲಿ ಸಂಜೆ ಬೆಳ್ತಂಗಡಿ ನ್ಯಾಯಾಲಯ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಬಳಿಯಿಂದ ಪೊಲೀಸರು ಕಳ್ಳತನಕ್ಕೆ ಉಪಯೋಗಿಸಿದ ಒಂದು ಸ್ಕ್ರೂ ಡ್ರೈವರ್ , ಒಂದು ರಾಡ್, ಒಂದು ಆತನ ಕೀ ಪ್ಯಾಂಡ್ ಮೊಬೈಲ್ , ಕಳ್ಳತನ ಮಾಡಿದ ಒಂದು ಆಂಡ್ರ್ಯಾಡ್ ಮೊಬೈಲ್ ,ಒಂದು ಬ್ಯಾಗ್ ಹಾಗೂ 700 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

Related posts

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya
error: Content is protected !!