27.4 C
ಪುತ್ತೂರು, ಬೆಳ್ತಂಗಡಿ
July 9, 2026
ಅಪಘಾತತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ: ಮುಂಡಾಜೆ ಕಾರುಗಳು ಮುಖಾಮುಖಿ ಡಿಕ್ಕಿಮುಂಡಾಜೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಸೀಟು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು 6 ಮಂದಿ ಗಾಯಗೋಂಡ ಘಟನೆ ಜು.9 ರಂದು ಬೆಳಿಗ್ಗೆ ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದ ಮಹೀಂದ್ರಾ ಕಾರು ಹಾಗೂ ಉಜಿರೆ ಕಡೆಗೆ ಬರುತ್ತಿದ್ದ  ಝೇನ್ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಹೀಂದ್ರಾ ಕಾರು ಪಲ್ಟಿಯಾಗಿ ರಸ್ತೆ ಬದಿ ಚರಂಡಿಗೆ ಬಿದ್ದಿದೆ. ಡಿಕ್ಕಿಯ ರಭಸಕ್ಕೆ ಪಲ್ಟಿಯಾದ ಮಹೀಂದ್ರಾ ಕಾರು ಮರಕ್ಕೆ ತಗಲುತ್ತಿದ್ದಾರೆ ದೊಡ್ಡ ಮಟ್ಟದ ಅಪಾಯ ಸಂಭವಿಸುತ್ತಿತ್ತು.

ಮಹೀಂದ್ರಾ ಕಾರಿನಲ್ಲಿದ ಮಂಗಳೂರಿನ ಕಾವೂರು ಮೂಲದ  ವಿನಿತಾ 22, ಗೌರಮ್ಮ49, ಕೊಟ್ರೆಗೌಡ55 ಹಾಗೂ ಝೇನ್ ಕಾರಿನಲ್ಲಿದ ಯಾದಗಿರಿ ಸುರಪುರ ಮೂಲದ ಭೀಮಣ್ಣ65, ಶ್ರೀನಿವಾಸ 32ಶಶಿಧರ33ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ನೇರವಾಗಿ ಮಳೆಗಾಲದಲ್ಲಿ ರಸ್ತೆ ಜಾರುವ ಸಂಭವ ಹೆಚ್ಚಿದ್ದು ಸೀಟು ಪ್ರದೇಶದಲ್ಲಿ ಆಗಾಗ ಅಪಘಾತ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya
error: Content is protected !!