28.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

ಮುಂಡಾಜೆ: ಮೊಬೈಲ್ ನೆಟ್ವರ್ಕ್ ಗೆ ರಸ್ತೆ ಕಾಮಗಾರಿ ಅಡ್ಡಿಯಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದ ಖಾಸಗಿ ಮೊಬೈಲ್ ಟವರ್ ನಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ. ಇಲ್ಲಿ ವಿದ್ಯುತ್ ಇದ್ದರೆ ಮಾತ್ರ ನೆಟ್ವರ್ಕ್ ಸಿಗುತ್ತದೆ. ಆದರೆ ಕಳೆದ ಕೆಲವು ದಿನಗಳಿಂದ ಮುಂಡಾಜೆ ಭಾಗದಲ್ಲಿ ವಿದ್ಯುತ್ ಸಮಸ್ಯೆ ವಿಪರೀತವಾಗಿದೆ. ಇದರಿಂದ ಇಲ್ಲಿನ ಸಾವಿರಾರು. ಗ್ರಾಹಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮೊಬೈಲ್ ಟವರ್ ಸುತ್ತ ಗಿಡಗಂಟಿ, ಬಳ್ಳಿಗಳು ಅವರಿಸಿದ್ದು, ಅವು ಟವರ್ ನ್ನು ಕೂಡ ಸುತ್ತುವರೆದಿವೆ.
ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿದಾಗ, “ನೆಟ್ವರ್ಕ್ ಸರಿಪಡಿಸಲು ರಸ್ತೆ ಅಡ್ಡಿಯಾಗಿದೆ,” ಎನ್ನುವ ರೋಚಕ ಉತ್ತರ ಲಭಿಸಿದೆ.

ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ ಟವರ್ ಬಳಿ ಗುಡ್ಡವನ್ನು ಕಡಿಯಲಾಗಿದ್ದು, ಇದರಿಂದಾಗಿ ಗುಡ್ಡದ ಮೇಲಿರುವ ಟವರ್ ಬಳಿಯಿರುವ ಜನರೇಟರ್‌ಗೆ ಇಂಧನ ಸರಬರಾಜು ಮಾಡಲು ತೊಂದರೆಯುಂಟಾಗಿ ಈ ರೀತಿ ಸಮಸ್ಯೆ ಮರುಕಳಿಸುತ್ತಿದೆ ಎನ್ನುವ ಸಮಜಾಯಿಷಿ ದೊರೆತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ. ದಿನಪೂರ್ತಿ ನೆಟ್ವರ್ಕ್ ಸಮಸ್ಯೆಯ ಪರಿಣಾಮ ಯಾವುದೇ ಕೆಲಸ ನಿರ್ವಹಿಸಲು ಅಡ್ಡಿಯಾಗಿದ್ದು, ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದನೆ ಇಲ್ಲದಂತಾಗಿದೆ.

Related posts

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!