27.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯಲ್ಲಿ ‘ಗಾಯತ್ರಿ ಮೆಡಿಕಲ್ಸ್’ ಶುಭಾರಂಭ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯ ಹೊಸ ಭರವಸೆ

ನಾರಾವಿ: ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಔಷಧಿಗಳು ಹಾಗೂ ಆರೋಗ್ಯ ಸೇವೆಗಳನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ನಾರಾವಿಯ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ ‘ಗಾಯತ್ರಿ ಮೆಡಿಕಲ್ಸ್’ ನೂತನವಾಗಿ ಇತ್ತೀಚೆಗೆ ಶುಭಾರಂಭಗೊಂಡಿತು.

ನೂತನ ಮೆಡಿಕಲ್ಸ್ ನ್ನು ಗಾಯತ್ರಿ ಕಾಂಪ್ಲೆಕ್ಸ್‌ನ ಮಾಲಕರಾದ ಸುನಂದ ಸುಂದರ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಸೇವೆ ಎನ್ನುವುದು ಕೇವಲ ವ್ಯಾಪಾರವಲ್ಲ, ಸಮಾಜಸೇವೆಯೂ ಹೌದು. ಜನರ ಆರೋಗ್ಯದ ಕಾಳಜಿ ಹಾಗೂ ಗುಣಮಟ್ಟದ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭಗೊಂಡಿರುವ ಗಾಯತ್ರಿ ಮೆಡಿಕಲ್ಸ್‌ನಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಔಷಧಿಗಳು ಹಾಗೂ ಆರೋಗ್ಯ ಸಂಬಂಧಿತ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯವಾಗಲಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್. ಸುಧಾಕರ ಭಂಡಾರಿ ಹಾಗೂ ಪಂಚಮಿ ವಾಣಿಜ್ಯ ಸಂಕೀರ್ಣದ ಮಾಲಕರಾದ ಸತೀಶ್ ಆಚಾರ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಸೇವಾ ಕೇಂದ್ರಗಳು ಆರಂಭಗೊಳ್ಳುವುದು ಸಾರ್ವಜನಿಕರಿಗೆ ಅತ್ಯಂತ ಅನುಕೂಲಕರ ಬೆಳವಣಿಗೆಯಾಗಿದ್ದು, ಸಂಸ್ಥೆ ಉತ್ತಮ ಸೇವೆಯ ಮೂಲಕ ಜನರ ವಿಶ್ವಾಸ ಗಳಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಿಣಿ, ಉದಯ ಹೆಗ್ಡೆ ನಾರಾವಿ,ಜಿನೇಶ್ ಜೈನ್, ಕೃಷ್ಣ ತಂತ್ರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ನಾರಾಯಣ ಪೂಜಾರಿ, ವಿಶ್ವನಾಥ ಪೂಜಾರಿ, ರಾಜೇಶ್ ಆಚಾರ್ಯ, ರವಿ ಬಂಗೇರ ಅಳದಂಗಡಿ, ಎಂ.ಎಸ್. ಪೂಜಾರಿ ಮರೋಡಿ,ರಾಮಪ್ಪ ಪೂಜಾರಿ ಅಳದಂಗಡಿ, ಅಶೋಕ್ ಕುಮಾರ್ ಜೈನ್ ಈದು, ಸುಪ್ರೀಯಾ–ಹರೀಶ್ ನಾರಾವಿ, ಭಾಗ್ಯಶ್ರೀ–ಅನಿಲ್ ನಾರಾವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ನೂತನ ಸಂಸ್ಥೆಗೆ ಶುಭ ಕೋರಿದರು.

ಆಗಮಿಸಿದ ಅತಿಥಿಗಳನ್ನು ಸಂಸ್ಥೆಯ ಮುಖ್ಯಸ್ಥರಾದ ರಾಮಚಂದ್ರ ಹಾಗೂ ಕಾವ್ಯಾಶ್ರೀ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು.

ಗಾಯತ್ರಿ ಮೆಡಿಕಲ್ಸ್‌ನಲ್ಲಿ ಲಭ್ಯವಿರುವ ಸೇವೆಗಳು

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು
  • ಮಕ್ಕಳ ಹಾಗೂ ಹಿರಿಯರ ಔಷಧಿಗಳು
  • ಆರೋಗ್ಯ ಮತ್ತು ವೈಯಕ್ತಿಕ ಆರೈಕೆ ಉತ್ಪನ್ನಗಳು
  • ವೈದ್ಯರ ಸಲಹೆಯ ಮೇರೆಗೆ ದೊರೆಯುವ ಔಷಧಿಗಳು
  • ಗುಣಮಟ್ಟದ ಸೇವೆ ಹಾಗೂ ಗ್ರಾಹಕ ಸ್ನೇಹಿ ವ್ಯವಸ್ಥೆ

Related posts

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!