24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯಲ್ಲಿ ‘ಗಾಯತ್ರಿ ಮೆಡಿಕಲ್ಸ್’ ಶುಭಾರಂಭ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯ ಹೊಸ ಭರವಸೆ

ನಾರಾವಿ: ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಔಷಧಿಗಳು ಹಾಗೂ ಆರೋಗ್ಯ ಸೇವೆಗಳನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ನಾರಾವಿಯ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ ‘ಗಾಯತ್ರಿ ಮೆಡಿಕಲ್ಸ್’ ನೂತನವಾಗಿ ಇತ್ತೀಚೆಗೆ ಶುಭಾರಂಭಗೊಂಡಿತು.

ನೂತನ ಮೆಡಿಕಲ್ಸ್ ನ್ನು ಗಾಯತ್ರಿ ಕಾಂಪ್ಲೆಕ್ಸ್‌ನ ಮಾಲಕರಾದ ಸುನಂದ ಸುಂದರ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಸೇವೆ ಎನ್ನುವುದು ಕೇವಲ ವ್ಯಾಪಾರವಲ್ಲ, ಸಮಾಜಸೇವೆಯೂ ಹೌದು. ಜನರ ಆರೋಗ್ಯದ ಕಾಳಜಿ ಹಾಗೂ ಗುಣಮಟ್ಟದ ಸೇವೆಯನ್ನು ಪ್ರಧಾನ ಉದ್ದೇಶವನ್ನಾಗಿ ಮಾಡಿಕೊಂಡು ಆರಂಭಗೊಂಡಿರುವ ಗಾಯತ್ರಿ ಮೆಡಿಕಲ್ಸ್‌ನಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಔಷಧಿಗಳು ಹಾಗೂ ಆರೋಗ್ಯ ಸಂಬಂಧಿತ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯವಾಗಲಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್. ಸುಧಾಕರ ಭಂಡಾರಿ ಹಾಗೂ ಪಂಚಮಿ ವಾಣಿಜ್ಯ ಸಂಕೀರ್ಣದ ಮಾಲಕರಾದ ಸತೀಶ್ ಆಚಾರ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಸೇವಾ ಕೇಂದ್ರಗಳು ಆರಂಭಗೊಳ್ಳುವುದು ಸಾರ್ವಜನಿಕರಿಗೆ ಅತ್ಯಂತ ಅನುಕೂಲಕರ ಬೆಳವಣಿಗೆಯಾಗಿದ್ದು, ಸಂಸ್ಥೆ ಉತ್ತಮ ಸೇವೆಯ ಮೂಲಕ ಜನರ ವಿಶ್ವಾಸ ಗಳಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಿಣಿ, ಉದಯ ಹೆಗ್ಡೆ ನಾರಾವಿ,ಜಿನೇಶ್ ಜೈನ್, ಕೃಷ್ಣ ತಂತ್ರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ನಾರಾಯಣ ಪೂಜಾರಿ, ವಿಶ್ವನಾಥ ಪೂಜಾರಿ, ರಾಜೇಶ್ ಆಚಾರ್ಯ, ರವಿ ಬಂಗೇರ ಅಳದಂಗಡಿ, ಎಂ.ಎಸ್. ಪೂಜಾರಿ ಮರೋಡಿ,ರಾಮಪ್ಪ ಪೂಜಾರಿ ಅಳದಂಗಡಿ, ಅಶೋಕ್ ಕುಮಾರ್ ಜೈನ್ ಈದು, ಸುಪ್ರೀಯಾ–ಹರೀಶ್ ನಾರಾವಿ, ಭಾಗ್ಯಶ್ರೀ–ಅನಿಲ್ ನಾರಾವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ನೂತನ ಸಂಸ್ಥೆಗೆ ಶುಭ ಕೋರಿದರು.

ಆಗಮಿಸಿದ ಅತಿಥಿಗಳನ್ನು ಸಂಸ್ಥೆಯ ಮುಖ್ಯಸ್ಥರಾದ ರಾಮಚಂದ್ರ ಹಾಗೂ ಕಾವ್ಯಾಶ್ರೀ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು.

ಗಾಯತ್ರಿ ಮೆಡಿಕಲ್ಸ್‌ನಲ್ಲಿ ಲಭ್ಯವಿರುವ ಸೇವೆಗಳು

  • ಎಲ್ಲಾ ರೀತಿಯ ವೈದ್ಯಕೀಯ ಔಷಧಿಗಳು
  • ಮಕ್ಕಳ ಹಾಗೂ ಹಿರಿಯರ ಔಷಧಿಗಳು
  • ಆರೋಗ್ಯ ಮತ್ತು ವೈಯಕ್ತಿಕ ಆರೈಕೆ ಉತ್ಪನ್ನಗಳು
  • ವೈದ್ಯರ ಸಲಹೆಯ ಮೇರೆಗೆ ದೊರೆಯುವ ಔಷಧಿಗಳು
  • ಗುಣಮಟ್ಟದ ಸೇವೆ ಹಾಗೂ ಗ್ರಾಹಕ ಸ್ನೇಹಿ ವ್ಯವಸ್ಥೆ

Related posts

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ : ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

Suddi Udaya
error: Content is protected !!