23.4 C
ಪುತ್ತೂರು, ಬೆಳ್ತಂಗಡಿ
August 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು ಬೆಳ್ತಂಗಡಿ ಕಚೇರಿಯಲ್ಲಿ ಜು.9 ರಂದು ಸಂಜೆ 3 ಗಂಟೆಗೆ ಅಧಿಕಾರ ಸ್ವೀಕರಿಸಿಕೊಂಡರು.

ಈ ವೇಳೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆಯ ವರದಿಗಾರ ಮನೀಶ್ ಅಂಚನ್ ಪಾಲೇದು ಅವರು ಪತ್ರಿಕೆ‌ ನೀಡಿ ಸ್ವಾಗತಿಸಿದರು. ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ, ಹೆಚ್. ಡಿ. ಕೋಟೆ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya
error: Content is protected !!