27.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

ಮುಂಡಾಜೆ: ಮೊಬೈಲ್ ನೆಟ್ವರ್ಕ್ ಗೆ ರಸ್ತೆ ಕಾಮಗಾರಿ ಅಡ್ಡಿಯಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದ ಖಾಸಗಿ ಮೊಬೈಲ್ ಟವರ್ ನಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ. ಇಲ್ಲಿ ವಿದ್ಯುತ್ ಇದ್ದರೆ ಮಾತ್ರ ನೆಟ್ವರ್ಕ್ ಸಿಗುತ್ತದೆ. ಆದರೆ ಕಳೆದ ಕೆಲವು ದಿನಗಳಿಂದ ಮುಂಡಾಜೆ ಭಾಗದಲ್ಲಿ ವಿದ್ಯುತ್ ಸಮಸ್ಯೆ ವಿಪರೀತವಾಗಿದೆ. ಇದರಿಂದ ಇಲ್ಲಿನ ಸಾವಿರಾರು. ಗ್ರಾಹಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮೊಬೈಲ್ ಟವರ್ ಸುತ್ತ ಗಿಡಗಂಟಿ, ಬಳ್ಳಿಗಳು ಅವರಿಸಿದ್ದು, ಅವು ಟವರ್ ನ್ನು ಕೂಡ ಸುತ್ತುವರೆದಿವೆ.
ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿದಾಗ, “ನೆಟ್ವರ್ಕ್ ಸರಿಪಡಿಸಲು ರಸ್ತೆ ಅಡ್ಡಿಯಾಗಿದೆ,” ಎನ್ನುವ ರೋಚಕ ಉತ್ತರ ಲಭಿಸಿದೆ.

ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ ಟವರ್ ಬಳಿ ಗುಡ್ಡವನ್ನು ಕಡಿಯಲಾಗಿದ್ದು, ಇದರಿಂದಾಗಿ ಗುಡ್ಡದ ಮೇಲಿರುವ ಟವರ್ ಬಳಿಯಿರುವ ಜನರೇಟರ್‌ಗೆ ಇಂಧನ ಸರಬರಾಜು ಮಾಡಲು ತೊಂದರೆಯುಂಟಾಗಿ ಈ ರೀತಿ ಸಮಸ್ಯೆ ಮರುಕಳಿಸುತ್ತಿದೆ ಎನ್ನುವ ಸಮಜಾಯಿಷಿ ದೊರೆತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ. ದಿನಪೂರ್ತಿ ನೆಟ್ವರ್ಕ್ ಸಮಸ್ಯೆಯ ಪರಿಣಾಮ ಯಾವುದೇ ಕೆಲಸ ನಿರ್ವಹಿಸಲು ಅಡ್ಡಿಯಾಗಿದ್ದು, ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದನೆ ಇಲ್ಲದಂತಾಗಿದೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
error: Content is protected !!