August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ಸ್ವಯಂಸೇವಕರಿಗಾಗಿ “ಎನ್‌ಎಸ್‌ಎಸ್‌ನ ಉದ್ದೇಶ, ಧ್ಯೇಯ ಹಾಗೂ ಸ್ವಯಂಸೇವಕರ ಜವಾಬ್ದಾರಿಗಳು” ಕುರಿತು ಪ್ರಶಿಕ್ಷಣ ಕಾರ್ಯಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಕನ್ನಡ ಉಪನ್ಯಾಸಕರೂ ಹಾಗೂ ಹಿರಿಯ ಎನ್‌ಎಸ್‌ಎಸ್ ಸ್ವಯಂಸೇವಕರೂ ಆದ ಶ್ರೀ ಬೆಳಿಯಪ್ಪ ಕೆ. ಅವರು ಭಾಗವಹಿಸಿ, ಎನ್‌ಎಸ್‌ಎಸ್‌ನ ಧ್ಯೇಯ, ಸೇವಾ ಮನೋಭಾವ, ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣಗಳು, ಸಮಾಜಮುಖಿ ಚಟುವಟಿಕೆಗಳು ಹಾಗೂ ಶಿಸ್ತು-ಬದ್ಧತೆಯ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳು ಸಮಾಜ ಸೇವೆಯ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀ ದಿನೇಶ್ ಗೌಡ ಯು. ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಸಹ ಕಾರ್ಯಕ್ರಮ ಅಧಿಕಾರಿ ಕುಮಾರಿ ಶ್ರಾವ್ಯ ಎಸ್. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಯಂಸೇವಕ ನಿಶಿತ್ ಸ್ವಾಗತಿಸಿದರು. ಸ್ವಯಂಸೇವಕಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ವಯಂಸೇವಕಿ ಸೌಂದರ್ಯ ವಂದನಾರ್ಪಣೆ ಸಲ್ಲಿಸಿದರು.

ಈ ಪ್ರಶಿಕ್ಷಣ ಕಾರ್ಯಗಾರದಲ್ಲಿ ಎನ್‌ಎಸ್‌ಎಸ್‌ನ ಅನೇಕ ಸ್ವಯಂಸೇವಕರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Related posts

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya
error: Content is protected !!