23.6 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

ಗುರುವಾಯನಕೆರೆ: ದೇಶದ ಅತ್ಯುನ್ನತ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರ ಮಟ್ಟದ ‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ (IISER IAT 2026) ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್‌ ಗೌಡ ಎನ್‌ -ರ‍್ಯಾಂಕ್ 312 ಹಾಗೂ ಪಂಚಮಿ ಪಿ ಎನ್‌ -ರ‍್ಯಾಂಕ್ 430 ಅತ್ಯುನ್ನತ ಸಾಧನೆ ಮಾಡಿದ್ದು, ಉಳಿದಂತೆ ಹಲವು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಶ್ರೇಷ್ಠ ರ‍್ಯಾಂಕ್‌ಗಳನ್ನು ಗಿಟ್ಟಿಸಿಕೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳ ವಿವರ: ಯಶಸ್‌ ಗೌಡ ಎನ್‌ – ರ‍್ಯಾಂಕ್:312, ಪಂಚಮಿ ಪಿ ಎನ್‌ – ರ‍್ಯಾಂಕ್: 430, ನಿಶ್ಚಿತ – ರ‍್ಯಾಂಕ್: 505, ರಾಹುಲ್ ಬಿ – ರ‍್ಯಾಂಕ್: 677, ವಿದ್ಯಾಧರ್ ಬಿ ಆರ್ ‌ – ರ‍್ಯಾಂಕ್: 698, ಶಿಲ್ಪಿತಾ ಹೆಚ್‌ ಎಸ್‌ – ರ‍್ಯಾಂಕ್: 1088, ತಜ್ಞ ಟಿ ಎಸ್‌ – ರ‍್ಯಾಂಕ್: 2688, ಧೃತಿ ಎಂ – ರ‍್ಯಾಂಕ್: 3329′
ವಿದ್ಯಾರ್ಥಿಗಳ ಈ ಅತ್ಯುತ್ತಮ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ಗುಣಮಟ್ಟದ ಶಿಕ್ಷಣ, ನಿರಂತರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವೇ ಈ ಯಶಸ್ಸಿಗೆ ಕಾರಣ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು ಶ್ಲಾಘಿಸಿದ್ದಾರೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಉನ್ನತ ಸಂಶೋಧನಾ ಹಾದಿಗೆ ಕಾಲೇಜಿನ ಪರವಾಗಿ ಶುಭ ಹಾರೈಸಲಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!