23.7 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಡಾ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿದ್ದು ಹಾಗಾಗಿ ಪೂಜ್ಯರೊಂದಿಗೆ ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿ ರಾಜ್ಯಾಧಕ್ಷ ಪ್ರಣವಾನಂದರಾಮ್ ಮಹಾಸ್ವಾಮಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದರು.

ಅವರು ಜು. 10 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ್ ಸ್ವಾಮಿ ದರ್ಶನ ಪಡೆದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅವರನ್ನು ಸನ್ಮಾನಿಸಿದರು.

ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿ ಸನಾತನ ಧರ್ಮದ ಮೇಲೆ ಈ ಹಿಂದೆಯೂ ದಾಳಿ ನಡೆದಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಪರ ಬೆಂಬಲ ಇದ್ದೇವೆ ಎಂಬುವುದನ್ನು ತಿಳಿಸುವುದಕ್ಕೆ ಬಂದಿದ್ದೇವೆ. 200 ಸ್ವಾಮೀಜಿಗಳು ಸೇರಿ  1 ಲಕ್ಷ ಮಂದಿಯ ಭಕ್ತ ಸಂಗಮವನ್ನು ಮಾಡುತ್ತೇವೆ. ಇದರ ಹಿಂದೆ ಇರುವ ದುಷ್ಟ ಶಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂಬುವುದಾಗಿ ಮುಖ್ಯ ಮಂತ್ರಿಗಳಿಗೆ ಆಗ್ರಹಿಸಿದರು.

ಭಾರತದ ಆಧ್ಯಾತ್ಮಿಕ ಕೇಂದ್ರಗಳಲ್ಲಿ ತುಂಬಾ ಪ್ರಸಿದ್ದಿಯನ್ನು ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವುದು ನಮಗೆಲ್ಲರಿಗೂ ಗೊತ್ತಿರುವ ವಿಷಯ. ಇವೆಲ್ಲವೂ ಸತ್ಯಕ್ಕೆ ದೂರವಾದ ಆರೋಪಗಳು ಆದ ಹಿನ್ನಲೆಯಲ್ಲಿ ದಿನಾಂಕಃ 27/28-ಜೂನ್ 2026 ರಂದು ಕಲ್ಬುರ್ಗಿಯಲ್ಲಿ ನಡೆದ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ಚಿಂತನ ಶಿಬಿರದಲ್ಲಿ 50ಕ್ಕೂ ಹೆಚ್ಚು ಅತಿ ಹಿಂದುಳಿದ ಸಮುದಾಯದ ಸ್ವಾಮೀಜಿಗಳು ಒಮ್ಮತದಿಂದ ಧರ್ಮಸ್ಥಳದ ಪರವಾಗಿ ನಿಲ್ಲಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ತೆಗೆದುಕೊಂಡ ನಿರ್ಣಯದಂತೆ ಈ ಬೆಂಬಲ ಪತ್ರವನ್ನು ಮಹಾಸಭೆಯಿಂದ ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಗೆ ಸಮರ್ಪಣೆ ಮಾಡುತ್ತೇವೆ. ನಾವೆಲ್ಲಾ ಅತಿ ಹಿಂದುಳಿದ ಸಮುದಾಯಗಳು ಕ್ಷೇತ್ರದ ಪರವಾಗಿ ಪ್ರಾಮಾಣಿಕವಾಗಿ ಇರುತ್ತೇವೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಈ ಪತ್ರದ ಮುಖಾಂತರ ತಿಳಿಸಲು ಬಯಸುತ್ತೇವೆ ಎಂದು ತಿಳಿಸಿದರು.

Related posts

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya
error: Content is protected !!