23.7 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

ಗುರುವಾಯನಕೆರೆ: ದೇಶದ ಅತ್ಯುನ್ನತ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರ ಮಟ್ಟದ ‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ (IISER IAT 2026) ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್‌ ಗೌಡ ಎನ್‌ -ರ‍್ಯಾಂಕ್ 312 ಹಾಗೂ ಪಂಚಮಿ ಪಿ ಎನ್‌ -ರ‍್ಯಾಂಕ್ 430 ಅತ್ಯುನ್ನತ ಸಾಧನೆ ಮಾಡಿದ್ದು, ಉಳಿದಂತೆ ಹಲವು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಶ್ರೇಷ್ಠ ರ‍್ಯಾಂಕ್‌ಗಳನ್ನು ಗಿಟ್ಟಿಸಿಕೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳ ವಿವರ: ಯಶಸ್‌ ಗೌಡ ಎನ್‌ – ರ‍್ಯಾಂಕ್:312, ಪಂಚಮಿ ಪಿ ಎನ್‌ – ರ‍್ಯಾಂಕ್: 430, ನಿಶ್ಚಿತ – ರ‍್ಯಾಂಕ್: 505, ರಾಹುಲ್ ಬಿ – ರ‍್ಯಾಂಕ್: 677, ವಿದ್ಯಾಧರ್ ಬಿ ಆರ್ ‌ – ರ‍್ಯಾಂಕ್: 698, ಶಿಲ್ಪಿತಾ ಹೆಚ್‌ ಎಸ್‌ – ರ‍್ಯಾಂಕ್: 1088, ತಜ್ಞ ಟಿ ಎಸ್‌ – ರ‍್ಯಾಂಕ್: 2688, ಧೃತಿ ಎಂ – ರ‍್ಯಾಂಕ್: 3329′
ವಿದ್ಯಾರ್ಥಿಗಳ ಈ ಅತ್ಯುತ್ತಮ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ಗುಣಮಟ್ಟದ ಶಿಕ್ಷಣ, ನಿರಂತರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವೇ ಈ ಯಶಸ್ಸಿಗೆ ಕಾರಣ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು ಶ್ಲಾಘಿಸಿದ್ದಾರೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಉನ್ನತ ಸಂಶೋಧನಾ ಹಾದಿಗೆ ಕಾಲೇಜಿನ ಪರವಾಗಿ ಶುಭ ಹಾರೈಸಲಾಗಿದೆ.

Related posts

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!