ಸೌತಡ್ಕ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್ಎಂ ಯೋಗೀಶ್ ಹಾಗೂ ಅವರ ಪತ್ನಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಕಾರ್ಯಗಳಿಗೆ ಬ್ಯಾಂಕ್ ಆಫ್ ಬರೋಡದ ಸಿಎಸ್ಆರ್ (CSR) ನಿಧಿಯಿಂದ ಅಗತ್ಯ ನೆರವು ನೀಡುವ ಭರವಸೆಯನ್ನು ಅವರು ನೀಡಿದರು.
ದೇವಳದ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಹಾಗೂ ದೇವಸ್ಥಾನದ ಅರ್ಚಕರು ಯೋಗೀಶ್ ದಂಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿ ದೇವರ ಪ್ರಸಾದವನ್ನು ನೀಡಿ ಗೌರವಿಸಿದರು.















