23.7 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಡಾ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿದ್ದು ಹಾಗಾಗಿ ಪೂಜ್ಯರೊಂದಿಗೆ ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿ ರಾಜ್ಯಾಧಕ್ಷ ಪ್ರಣವಾನಂದರಾಮ್ ಮಹಾಸ್ವಾಮಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದರು.

ಅವರು ಜು. 10 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ್ ಸ್ವಾಮಿ ದರ್ಶನ ಪಡೆದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅವರನ್ನು ಸನ್ಮಾನಿಸಿದರು.

ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿ ಸನಾತನ ಧರ್ಮದ ಮೇಲೆ ಈ ಹಿಂದೆಯೂ ದಾಳಿ ನಡೆದಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಪರ ಬೆಂಬಲ ಇದ್ದೇವೆ ಎಂಬುವುದನ್ನು ತಿಳಿಸುವುದಕ್ಕೆ ಬಂದಿದ್ದೇವೆ. 200 ಸ್ವಾಮೀಜಿಗಳು ಸೇರಿ  1 ಲಕ್ಷ ಮಂದಿಯ ಭಕ್ತ ಸಂಗಮವನ್ನು ಮಾಡುತ್ತೇವೆ. ಇದರ ಹಿಂದೆ ಇರುವ ದುಷ್ಟ ಶಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂಬುವುದಾಗಿ ಮುಖ್ಯ ಮಂತ್ರಿಗಳಿಗೆ ಆಗ್ರಹಿಸಿದರು.

ಭಾರತದ ಆಧ್ಯಾತ್ಮಿಕ ಕೇಂದ್ರಗಳಲ್ಲಿ ತುಂಬಾ ಪ್ರಸಿದ್ದಿಯನ್ನು ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವುದು ನಮಗೆಲ್ಲರಿಗೂ ಗೊತ್ತಿರುವ ವಿಷಯ. ಇವೆಲ್ಲವೂ ಸತ್ಯಕ್ಕೆ ದೂರವಾದ ಆರೋಪಗಳು ಆದ ಹಿನ್ನಲೆಯಲ್ಲಿ ದಿನಾಂಕಃ 27/28-ಜೂನ್ 2026 ರಂದು ಕಲ್ಬುರ್ಗಿಯಲ್ಲಿ ನಡೆದ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ಚಿಂತನ ಶಿಬಿರದಲ್ಲಿ 50ಕ್ಕೂ ಹೆಚ್ಚು ಅತಿ ಹಿಂದುಳಿದ ಸಮುದಾಯದ ಸ್ವಾಮೀಜಿಗಳು ಒಮ್ಮತದಿಂದ ಧರ್ಮಸ್ಥಳದ ಪರವಾಗಿ ನಿಲ್ಲಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ತೆಗೆದುಕೊಂಡ ನಿರ್ಣಯದಂತೆ ಈ ಬೆಂಬಲ ಪತ್ರವನ್ನು ಮಹಾಸಭೆಯಿಂದ ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಗೆ ಸಮರ್ಪಣೆ ಮಾಡುತ್ತೇವೆ. ನಾವೆಲ್ಲಾ ಅತಿ ಹಿಂದುಳಿದ ಸಮುದಾಯಗಳು ಕ್ಷೇತ್ರದ ಪರವಾಗಿ ಪ್ರಾಮಾಣಿಕವಾಗಿ ಇರುತ್ತೇವೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಈ ಪತ್ರದ ಮುಖಾಂತರ ತಿಳಿಸಲು ಬಯಸುತ್ತೇವೆ ಎಂದು ತಿಳಿಸಿದರು.

Related posts

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya
error: Content is protected !!