25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

ಗುರುವಾಯನಕೆರೆ: ದೇಶದ ಅತ್ಯುನ್ನತ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರ ಮಟ್ಟದ ‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ (IISER IAT 2026) ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್‌ ಗೌಡ ಎನ್‌ -ರ‍್ಯಾಂಕ್ 312 ಹಾಗೂ ಪಂಚಮಿ ಪಿ ಎನ್‌ -ರ‍್ಯಾಂಕ್ 430 ಅತ್ಯುನ್ನತ ಸಾಧನೆ ಮಾಡಿದ್ದು, ಉಳಿದಂತೆ ಹಲವು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಶ್ರೇಷ್ಠ ರ‍್ಯಾಂಕ್‌ಗಳನ್ನು ಗಿಟ್ಟಿಸಿಕೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳ ವಿವರ: ಯಶಸ್‌ ಗೌಡ ಎನ್‌ – ರ‍್ಯಾಂಕ್:312, ಪಂಚಮಿ ಪಿ ಎನ್‌ – ರ‍್ಯಾಂಕ್: 430, ನಿಶ್ಚಿತ – ರ‍್ಯಾಂಕ್: 505, ರಾಹುಲ್ ಬಿ – ರ‍್ಯಾಂಕ್: 677, ವಿದ್ಯಾಧರ್ ಬಿ ಆರ್ ‌ – ರ‍್ಯಾಂಕ್: 698, ಶಿಲ್ಪಿತಾ ಹೆಚ್‌ ಎಸ್‌ – ರ‍್ಯಾಂಕ್: 1088, ತಜ್ಞ ಟಿ ಎಸ್‌ – ರ‍್ಯಾಂಕ್: 2688, ಧೃತಿ ಎಂ – ರ‍್ಯಾಂಕ್: 3329′
ವಿದ್ಯಾರ್ಥಿಗಳ ಈ ಅತ್ಯುತ್ತಮ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ಗುಣಮಟ್ಟದ ಶಿಕ್ಷಣ, ನಿರಂತರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವೇ ಈ ಯಶಸ್ಸಿಗೆ ಕಾರಣ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು ಶ್ಲಾಘಿಸಿದ್ದಾರೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಉನ್ನತ ಸಂಶೋಧನಾ ಹಾದಿಗೆ ಕಾಲೇಜಿನ ಪರವಾಗಿ ಶುಭ ಹಾರೈಸಲಾಗಿದೆ.

Related posts

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಅಗ್ನಿಪಥ್ , ಪೊಲೀಸ್, ವಾಚರ್ ಹುದ್ದೆಯ ನಿರೀಕ್ಷೆಯಲ್ಲಿರೋ ಅಭ್ಯರ್ಥಿಗಳಿಗೆ ವಿದ್ಯಾಮಾತಾದಿಂದ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಆಯೋಜನೆ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya
error: Content is protected !!