ಬೆಳ್ತಂಗಡಿ: ತಾಲೂಕು ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಅಧ್ಯಕ್ಷ ರತ್ನಾಕರ್ ಬುಣ್ಣನ್ ಹಾಗೂ ಹಿಂದುಳಿದ ವರ್ಗಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರ ಉಪಸ್ಥಿತಿಯಲ್ಲಿ ಫಂಡಿಜೆವಾಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಭಂಡಾರಿ ಹಾಗೂ ವಿಠಲ ಆಚಾರ್ಯ, ಉಪಾಧ್ಯಕ್ಷರಾದ ರಾಜೇಶ್ ಮೂಡುಕೋಡಿ, ಅನಿತಾ ಕುಕ್ಕೇಡಿ, ಕಾರ್ಯದರ್ಶಿಯಾದ ಸುನಿಲ್ ಬಜಿರೆ, ಜೀವಂಧರ್ ಸಾಲಿಯಾನ್ ಕೊಕ್ರಾಡಿ, ಪ್ರಮೀಳಾ ಶೆಟ್ಟಿಗಾರ್, ಪ್ರಮೀಳಾ ಉಜಿರೆ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಉಪಸ್ಥಿತರಿದ್ದರು.















