July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯ ಚಟುವಟಿಕೆಗಳನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಪ್ರಶಾಂತ್ ಬಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಎನ್ ಎಸ್ ಎಸ್ ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಕ್ರೀಯಾಶೀಲರಾಗಿ ಪಾಲ್ಗೊಂಡಾಗ ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳಲು ಸಾಧ್ಯ. ಸಮಾಜದೊಂದಿಗೆ ಬೆರೆತು ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಬಹುದು “ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ರವರು ” ರಾಷ್ಟ್ರೀಯ ಸೇವಾ ಯೋಜನೆ ಸದೃಢ ಯುವ ಜನತೆಯಯನ್ನು ಸೃಷ್ಟಿಸುತ್ತದೆ. ಅರೋಗ್ಯವಂತ ರಾಷ್ಟ ನಿರ್ಮಾಣ ಮಾಡುವಲ್ಲಿ ಎನ್ ಎಸ್ ಎಸ್ ಅತ್ಯವಶ್ಯಕ. ರಾಷ್ಟ್ರೀಯ ಸೇವಾ ಯೋಜನೆ ಮೂಲಕ ಸ್ವಯಂ ಸೇವಕರು ಪಡೆವ ಅನುಭವ ಮುಂದಿನ ಜೀವನಕ್ಕೆ ಉತ್ತಮ ಅಡಿಪಾಯ “ಎಂದು ಹೇಳಿದರು.

ಇದೇ ಸಂದರ್ಭ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದ ಹಿರಿಯ ಸ್ವಯಂ ಸೇವಕ ಸುದರ್ಶನ್ ನಾಯಕ್ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 586 ಅಂಕಗಳನ್ನು ಪಡೆದ ಸ್ವಯಂ ಸೇವಕಿ ಗ್ರಂಥ ಇವರನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ನಾಗರಾಜ್ ಭಂಡಾರಿ, ಪ್ರಸನ್ನ ಕುಮಾರ್ ಐತಾಳ್, ಕನ್ನಡ ಉಪನ್ಯಾಸಕ ಸುಭಾಸ್ ರಾವ್ ಬೋಳೂರು ಉಪಸ್ಥಿತರಿದ್ದರು.


ಸ್ವಯಂ ಸೇವಕಿ ಅನ್ವಿತಾ ನಿರೂಪಿಸಿ ಘಟಕ ನಾಯಕಿ ನವನೀತು ಸ್ವಾಗತಿಸಿ ನಾಯಕ ವಿಶ್ವಾಸ್ ಧನ್ಯವಾದವಿತ್ತರು.

Related posts

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya
error: Content is protected !!