ಕಕ್ಯ ಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯನ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ವನ್ನು ಜಾಥಾದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ಈ ಜಾಥವನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ , ಸಂಯೋಜಕರಾದ ಯಶವಂತ್ ಜಿ ನಾಯಕ್ ಮತ್ತು ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕೆ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಎಲ್ . ಸಿ ಆರ್ ವಿದ್ಯಾಸಂಸ್ಥೆಯಿಂದ ಕಕ್ಯಪದವಿನ ಉಳಿಗ್ರಾಮ ಪಂಚಾಯತ್ ರವರೆಗೆ ಜಾಥಾ ಕಾರ್ಯಕ್ರಮವನ್ನು ಘೋಷ ವಾಕ್ಯದೊಂದಿಗೆ ಜಾಗೃತಿಯನ್ನು ಮೂಡಿಸಲಾಯಿತು. ಹಾಗೂ ಇದಕ್ಕೆ ಸಂಬಂಧಿಸಿದ ಕಿರುಚಿತ್ರವನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಿ ಅದರ ಮಾದಕ ವ್ಯಸನದ ಆಗೂ ಹೋಗುಗಳ ಕುರಿತು ಎಲ್ಲಾ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಲಾಯಿತು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಿಂದ ಮುಕ್ತರಾಗಿ ಉತ್ತಮವಾದ ಜೀವನ ಶೈಲಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿಗಳಾದ ನೀವು ಇಂತಹ ಮಾದಕ ವಸ್ತುಗಳಿಂದ ದೂರವಿದ್ದಲ್ಲಿ ಉತ್ತಮ ಜೀವನ ಸಾಧ್ಯ ಎಂದು ಪ್ರಾಥಮಿಕ ವಿಭಾಗದ ಸಹ ಶಿಕ್ಷಕರಾದ ಪ್ರಶಾಂತ್ . ಕೆ ತಿಳಿಸಿದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದ ಸಂಗೀತ ನಿರೂಪಿಸಿ ವಂದಿಸಿದರು. ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.















